ಬಳ್ಳಾರಿಯಲ್ಲಿ ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚವಾಣ್ ರೋಡ್ ಶೋ

ಬಳ್ಳಾರಿ, ಏ.29: ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲು ಶನಿವಾರ ನಗರಕ್ಕೆ ಆಗಮಿಸಿರುವ ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚವಾಣ್ ರೋಡ್ ಶೋ ನಡೆಸಿದರು.
ಖೂನಿ ಠಾಣಾ ಮಸೀದಿಯಿಂದ ರೋಡ್ ಶೋ ಆರಂಭಿಸಿದ ಚವಾಣ್ ಅವರು, ಕೌಲ್ ಬಜಾರ್ ಪ್ರದೇಶದಲ್ಲಿ ತೆರೆದ ವಾಹನದಲ್ಲಿ ಸಂಚರಿಸಿ ಮತಯಾಚಿಸಿದರು.
ಕೌಲ್ ಬಜಾರ್ ಪೊಲೀಸ್ ಠಾಣೆ ಬಳಿ ಸೇರಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು,
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದರೆ ಮತ್ತೇ ಡಬಲ್ ಇಂಜಿನ್ ಸರ್ಕಾರ ಬಂದಂತೆ ಆಗುತ್ತದೆ. ಇದರಿಂದ ರಾಜ್ಯ ದೇಶದ ಅಭಿವೃದ್ಧಿ ಆಗಲಿದೆ ಎಂದರು.
ಮಾಜಿ ಸಂಸದರಾದ ಜಿ.ಶಾಂತ, ಸಣ್ಣ ಫಕ್ಕೀರಪ್ಪ, ಮುಖಂಡ ಗುಜರಿ ಅಜೀಜ್ ಮತ್ತಿತರಿದ್ದರು.
*****

Leave a Reply

Your email address will not be published. Required fields are marked *