ಕನ್ನಡ ಪುಸ್ತಕ ಪ್ರಾಧಿಕಾರದ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟ: ಅತ್ಯುತ್ತಮ ಪ್ರಕಾಶನ ಪ್ರಶಸ್ತಿಗೆ ಚನ್ನಪಟ್ಟಣದ ಪಲ್ಲವ ಪ್ರಕಾಶನ ಆಯ್ಕೆ – ಡಾ. ಮಾನಸ

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿಗಗಳಿಗೆ ಸೋಮವಾರ ಅರ್ಹ ಗಣ್ಯರನ್ನು ಆಯ್ಕೆ ಮಾಡಲಾಗಿದೆ. ಇದರ ಜೊತೆಗೆ ಇದೇ ಮೊಟ್ಟಮೊದಲ ಬಾರಿಗೆ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಎರಡು ದತ್ತಿ ಬಹುಮಾನಗಳನ್ನು ಸಹ ನೀಡಲಾಗುತಿದ್ದು, ಪ್ರತಿ ವರ್ಷ ಇಬ್ಬರು ಚುಟುಕು ಸಾಹಿತಿಗಳಿಗೆ ಈ ದತ್ತಿ ಬಹುಮಾನವನ್ನು ನೀಡಲಾಗುವುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಹೇಳಿದ್ದಾರೆ.

ಪ್ರಶಸ್ತಿ ವಿವರ ಕೆಳಕಂಡಂತಿದೆ. ಅತ್ಯುತ್ತಮ ಪ್ರಕಾಶನ ಪ್ರಶಸ್ತಿ – ಪಲ್ಲವ ಪ್ರಕಾಶನ, ಹೊಸಪೇಟೆ
(ಪ್ರಶಸ್ತಿ ಮೊತ್ತ ರೂ.1,00,000-00)

ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ –  ಡಾ. ರಾಮೇಗೌಡ (ರಾಗೌ), ಮೈಸೂರು
(ಪ್ರಶಸ್ತಿ ಮೊತ್ತ ರೂ.75,000-00)

ಡಾ. ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ –
ಡಾ. ಶ್ರೀ ಚನ್ನವೀರ ಶಿವಾಚಾರ್ಯರು, ಬೀದರ್
(ಶ್ರೀ ಚನ್ನಬಸವೇಶ್ವರ ಸಂಸ್ಥಾನ ಹಿರೇಮಠ ಹಾರಕೂಡ)
(ಪ್ರಶಸ್ತಿ ಮೊತ್ತ ರೂ.50,000-00)

ಡಾ|| ಅನುಪಮಾ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿ –
ಡಾ|| ಬಿ.ಶ್ರೀನಿವಾಸ ಕಕ್ಕಿಲಾಯ, ಮಂಗಳೂರು

ಚುಟುಕು ಯೋಗಾಚಾರ್ಯ ಡಾ. ಎಂ.ಜಿ.ಆರ್. ಅರಸ್ ದತ್ತಿ ಬಹುಮಾನ –
ಶ್ರೀ ಎ.ಈ. ವೀರಭದ್ರೇಗೌಡ ಆಂದಲೆ
(ಚುಟುಕು ಮುಂಗಾರು ಹನಿಗಳು ಕವನ ಸಂಕಲನ)
(ಬಹುಮಾನದ ಮೊತ್ತ ರೂ.6,000-00)

ಡಾ. ಅಂಬಾ ಎಂ.ಜಿ.ಆರ್. ಅರಸ್ ದತ್ತಿ ಬಹುಮಾನ –
ಶ್ರೀಮತಿ ವಿ. ಸೀತಾಲಕ್ಷ್ಮಿವರ್ಮ, ವಿಟ್ಲ ಅರಮನೆ
(ಬೊಗಸೆಯೊಳಗಿನ ಚುಟುಕು ಸಾಗರ)
(ಬಹುಮಾನದ ಮೊತ್ತ ರೂ.6,000-00)

ಪ್ರಶಸ್ತಿ ಪ್ರದಾನ ದಿನಾಂಕವನ್ನು ಸಧ್ಯದಲ್ಲಿಯೇ ತಿಳಿಸಲಾಗುವುದು ಎಂದು ಡಾ. ಮಾನಸ ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *