
ಬೆಂಗಳೂರು, ಆ.12: ಸಾಹಿತಿ ಡಾ.ದ್ವಾರನಕುಂಟೆ ಪಾತಣ್ಣ ಅವರು ಬರೆದಿರುವ ರಾಣಿ ಅಹಿಲ್ಯಾಬಾಯಿ ಹೋಳ್ಕರ್, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕಾದಂಬರಿಗಳನ್ನು ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದರು.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಂ ರೇವಣ್ಣ, ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ಎಚ್.ಎಲ್.ಪುಷ್ಪ, ಶಾಸಕರಾದ ಮುನಿರಾಜು, ಹಿರಿಯ ಪತ್ರಕರ್ತರಾದ ನಾಗಣ್ಣ, ಬಿ.ಎಂ. ಹನೀಫ್, ಕನ್ನಡಪ್ರಭ ಸಂಪಾದಕರಾದ ಗಿರೀಶ್ ರಾವ್ ಹತ್ವಾರ್ ಅವರು ಈ ವೇಳೆ ಉಪಸ್ಥಿತರಿದ್ದರು.
