ಬಳ್ಳಾರಿ-ವಿಜಯನಗರ ಜಿಲ್ಲೆಗಳ 234 ಗ್ರಾಪಂಗಳಲ್ಲಿ ಕೊರೊನಾ ಸೋಂಕು : ಜಿಪಂ ಸಿಇಒ ಕೆ.ಆರ್.ನಂದಿನಿ

ಬಳ್ಳಾರಿ,ಮೇ 22: ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿರುವ 237 ಗ್ರಾಪಂಗಳ ಪೈಕಿ 234 ಗ್ರಾಪಂಗಳ ಜನರಿಗೆ ಕೊರೊನಾ ಸೊಂಕು ತಗುಲಿದೆ ಎಂದು ಜಿಪಂ ಸಿಇಒ ಕೆ.ಆರ್.ನಂದಿನಿ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಅವರಿ ಮಾತನಾಡಿದರು.
ಹಡಗಲಿ ತಾಲೂಕಿನ ಹ್ಯಾರಾಡ ಗ್ರಾಪಂ ಸೇರಿದಂತೆ 3 ಗ್ರಾಪಂಗಳ ವ್ಯಾಪ್ತಿಯಲ್ಲಿ ಮಾತ್ರ ಕೊರೊನಾ ಸೊಂಕಿತರಿಲ್ಲ.ಉಳಿದ ಎಲ್ಲ ಗ್ರಾಪಂಗಳಲ್ಲಿ ಕೊರೊನಾ ಸೊಂಕಿತರಿದ್ದು,ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿರುವ ಎಲ್ಲ ಗ್ರಾಪಂಗಳಲ್ಲಿ ಗ್ರಾಪಂ ಟಾಸ್ಕ್‍ಫೋರ್ಸ್‍ಗಳನ್ನು ಕ್ರಿಯಾಶೀಲಗೊಳಿಸಲಾಗಿದೆ. ಇದರ ಜೊತೆಗೆ ಬಳ್ಳಾರಿ ಜಿಲ್ಲಾಡಳಿತವು ವಿಶೇಷವಾಗಿ ಕುಟುಂಬ ಸಂರಕ್ಷಣಾ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ಈ ತಂಡದ ಸದಸ್ಯರು ಮನೆ-ಮನೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಸಮೀಕ್ಷೆಯ ಸಂದರ್ಭದಲ್ಲಿ ಜ್ವರ,ಶೀತ,ಕೆಮ್ಮುವಿನಂತ ಲಕ್ಷಣಗಳಿದ್ದಲ್ಲಿ ಜನರಲ್ ಮೆಡಿಕಲ್ ಕಿಟ್ ನೀಡಲಾಗುವುದು. ಮೂರು ದಿನಗಳಲ್ಲಿ ಕಡಿಮೆಯಾಗದಿದ್ದಲ್ಲಿ ಆರೋಗ್ಯ ಸಿಬ್ಬಂದಿ ರ್ಯಾಪಿಡ್ ಆಂಟಿಜೇನ್ ಕಿಟ್ ಮುಖಾಂತರ ತಪಾಸಣೆ ನಡೆಸುವರು. ಪಾಸಿಟಿವ್ ಬಂದಲ್ಲಿ ಕೋವಿಡ್ ಕಿಟ್ ನೀಡಲಿದ್ದಾರೆ ಎಂದರು.
ಏಪ್ರಿಲ್ ಅಂತ್ಯದ ವೇಳೆಗೆ ನರೇಗಾದಲ್ಲಿ ನಿಗದಿಪಡಿಸಿದಕ್ಕಿಂತ ಶೇ.150ರಷ್ಟು ಗುರಿ ಸಾಧಿಸಲಾಗಿದೆ ಎಂದು ಅವರು ವಿವರಿಸಿದರು.
ಸುದ್ದಿಗೋಷ್ಟಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಎಸ್ಪಿ ಸೈದುಲು ಅಡಾವತ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *