Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಗದಗ: 'ಕಲಾ ವಿಕಾಸ ಪುರಸ್ಕಾರ’ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ - Karnataka Kahale

ಗದಗ: ‘ಕಲಾ ವಿಕಾಸ ಪುರಸ್ಕಾರ’ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಗದಗ, ಮಾ.14:ಕಲಾವಿದರ ಮತ್ತು ಕಲಾಪೋಷಕರ ಸಂಘಟನೆಯಾದ ಇಲ್ಲಿನ ಕಲಾ ವಿಕಾಸ ಪರಿಷತ್ ಕಳೆದ 23 ವರ್ಷಗಳಿಂದ ಪ್ರತಿಭಾವಂತ, ಸಾಧಕರಿಗೆ ನೀಡುತ್ತಿರುವ ಕಲಾ ವಿಕಾಸ ಪುರಸ್ಕಾರ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿ ವರ್ಷ ‘ಕಲಾ ವಿಕಾಸ ಉತ್ಸವ’ದ ಸಮಾರಂಭದಲ್ಲಿ ನೀಡುತ್ತಾ ಬಂದಿರುವ ೨೪ನೇ ವರ್ಷದ ಪ್ರಶಸ್ತಿ, ಕಲಾ ವಿಕಾಸ ಪುರಸ್ಕಾರ ಪ್ರಶಸ್ತಿಗೆ ಶಾಸ್ತ್ರೀಯ ಸಂಗೀತ (ಗಾಯನ ವಾದನ, ಸುಗಮ ಸಂಗೀತ, ತತ್ವಪದ, ವಚನ ಗಾಯನ, ಜಾನಪದ ಸಂಗೀತ) ಕ್ಷೇತ್ರದಲ್ಲಿ ಮತ್ತು ಶಾಸ್ತ್ರೀಯ ನೃತ್ಯ (ಭರತನಾಟ್ಯ, ಕಥಕ್, ಕುಚುಪುಡಿ, ಮೊದಲಾದ ನೃತ್ಯ) ಪ್ರಕಾರದಲ್ಲಿ ಸಾಧನೆಗೈದ ಕಲಾವಿದರು ಅರ್ಜಿ ಸಲ್ಲಿಸಬಹುದಾಗಿದೆ.
ಈ ಪ್ರಶಸ್ತಿಯು ಗೌರವಧನ, ಪ್ರಶಸ್ತಿ ಫಲಕ, ನೆನಪಿನ ಕಾಣಿಕೆ, ಶಾಲು ಸತ್ಕಾರವನ್ನು ಒಳಗೊಂಡಿರುತ್ತದೆ. ಆಸಕ್ತ ಕಲಾವಿದರು ತಮ್ಮ ಸಂಪೂರ್ಣ ವಿವರ ಮತ್ತು ಕಲಾ ಪ್ರದರ್ಶನದ ವಿಡಿಯೋ ತುಣುಕುಗಳೊಂದಿಗೆ ವಾಟ್ಸಪ್ ೯೮೮೬೭೧೭೭೩೨ ನಂಬರಿಗೆ ಅಥವಾ kvpgadag@gmail.com ಈ ಇಮೇಲ್ ಗೆ ಕಳಿಸಿಕೊಡಬಹುದಾಗಿದೆ.


ಪುರಸ್ಕಾರಕ್ಕೆ ಆಯ್ಕೆಯಾದ ಕಲಾವಿದರು ತಮ್ಮ ಕಲಾ ಪ್ರದರ್ಶನ ನಡೆಸಿಕೊಡುವುದು ಕಡ್ಡಾಯವಾಗಿರುತ್ತದೆ. ಎಂದು ಕಲಾವಿಕಾಸ ಪರಿಷತ್ ಅಧ್ಯಕ್ಷ ಸಿ. ಕೆ. ಹೆಚ್. ಶಾಸ್ತ್ರಿ (ಕಡಣಿ) ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
—–