Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಗುಲ್ಬರ್ಗಾ: ಕಾಂಗ್ರೆಸ್ ಪಕ್ಷದ ರಾಧಾಕೃಷ್ಣ ದೊಡ್ಡಮನಿ ಸೇರಿ  ಮೂವರು ಅಭ್ಯರ್ಥಿಗಳಿಂದ ಐದು ನಾಮಪತ್ರಗಳು ಸಲ್ಲಿಕೆ - Karnataka Kahale

ಗುಲ್ಬರ್ಗಾ: ಕಾಂಗ್ರೆಸ್ ಪಕ್ಷದ ರಾಧಾಕೃಷ್ಣ ದೊಡ್ಡಮನಿ ಸೇರಿ  ಮೂವರು ಅಭ್ಯರ್ಥಿಗಳಿಂದ ಐದು ನಾಮಪತ್ರಗಳು ಸಲ್ಲಿಕೆ

ಕಲಬುರಗಿ,ಏ.12:ಗುಲಬರ್ಗಾ ಲೋಕಸಭಾ (ಪ.ಜಾ ಮೀಸಲು) ಕ್ಷೇತ್ರಕ್ಕೆ ಮೇ 7ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಮೊದಲನೇ ದಿನವಾದ ಶುಕ್ರವಾರ ಮೂವರು ಅಭ್ಯರ್ಥಿಗಳಿಂದ ಐದು ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ವಿವರ ಇಂತಿವೆ. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ರಾಧಾಕೃಷ್ಣ ದೊಡ್ಡಮನಿ ಅವರು 3 ನಾಮಪತ್ರ, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಉಮೇಶ ಗೋಪಾಲದೇವ ಮತ್ತು ಭಾರತೀಯ ಜನ ಸಾಮ್ರಾಟ್ ಪಾರ್ಟಿಯ ಅಭ್ಯರ್ಥಿಯಾಗಿ ತಾರಾಬಾಯಿ ಬೋವಿ ಅವರು ತಲಾ 1 ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸಲು ಏ. 19 ರಂದು ಕೊನೆಯ ದಿನವಾಗಿದೆ. ಏ. 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಏ. 22 ಕೊನೆ‌ ದಿನವಾಗಿರುತ್ತದೆ.