Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಕಾರವಾರ ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ: ಜಿಲ್ಲಾಧಿಕಾರಿ ಗಂಗೂಬಾಯಿ‌ ಮಾನಕರ - Karnataka Kahale

ಕಾರವಾರ ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ: ಜಿಲ್ಲಾಧಿಕಾರಿ ಗಂಗೂಬಾಯಿ‌ ಮಾನಕರ

ಕಾರವಾರ, ಜು.4: ಜಿಲ್ಲೆಯಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ತಗ್ಗು ಪ್ರದೇಶದಲ್ಲಿರುವವರನ್ನು ಈಗಾಗಲೇ ಸುರಕ್ಷಿತ ಸ್ಥಳಗಳಲ್ಲಿನ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಿ, ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದು, ಜಿಲ್ಲೆಯಲ್ಲಿ ಇನ್ನೂ 3 ರಿಂದ 4 ದಿನಗಳು ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಗೆ ರಾಜ್ಯ ಸರ್ಕಾರದಿಂದ 2 ರಾಷ್ಟೀಯ ವಿಪತ್ತು ನಿರ್ವಹಣಾ ತಂಡಗಳನ್ನು ಕಳುಹಿಸುವಂತೆ ಕೋರಿದ್ದು, ಈಗಾಗಲೇ ಈ ತಂಡಗಳು ಬೆಂಗಳೂರಿನಿಂದ ಹೊರಟ್ಟಿದ್ದು ಶುಕ್ರವಾರ ಈ ತಂಡಗಳು ಜಿಲ್ಲೆಗೆ ಆಗಮಿಸಲಿವೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.
ಈ ಎನ್.ಡಿ.ಆರ್.ಎಫ್ ನ ಪ್ರತಿ ತಂಡದಲ್ಲಿ ತಲಾ 25 ಮಂದಿ ರಕ್ಷಣಾ ಸಿಬ್ಬಂದಿಗಳಿರಲಿದ್ದು, ಯಾವುದೇ ರೀತಿಯ ತುರ್ತು ಕಾರ್ಯಚರಣೆಯನ್ನು ಕೈಗೊಳ್ಳಲು ಅಗತ್ಯವಿರುವ ಎಲ್ಲಾ ಅಗತ್ಯ ರಕ್ಷಣಾ ಸಾಧನಗಳೊಂದಿಗೆ ಬರುವ ಈ ತಂಡವನ್ನು ಕಾರವಾರ, ಕುಮುಟಾ ಮತ್ತು ಅಂಕೋಲ ಭಾಗದಲ್ಲಿ ನಿಯೋಜಿಸಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ ತೀವ್ರ ಮಳೆಯಿಂದ ತೊಂದರೆಗೊಳಗಾದ ಹೊನ್ನಾವರ, ಕುಮಟಾ ಮತ್ತು ಅಂಕೋಲ ತಾಲೂಕು ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಗಳ ಸಾರ್ವಜನಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದು, ಅವರಿಗೆ ಸಮೀಪದ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿದೆ. ಜಿಲ್ಲೆಯಲ್ಲಿ ಹೊನ್ನಾವರದಲ್ಲಿ 4 , ಕುಮಟಾ ದಲ್ಲಿ 2 ಮತ್ತು ಅಂಕೋಲದಲ್ಲಿ 1 ಸೇರಿದಂತೆ ಒಟ್ಟು 7 ಕಾಳಜಿ ಕೆಂದ್ರಗಳನ್ನು ತೆರೆದಿದ್ದು ಈ ಕೇಂದ್ರಗಳಲ್ಲಿ 230 ಕ್ಕೂ ಅಧಿಕ ಮಂದಿಗೆ ಆಶ್ರಯ ನೀಡಲಾಗಿದೆ. ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬಂದಪಟ್ಟ ತಾಲೂಕುಗಳ ತಹಸೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ.
ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳೊಂದಿಗೆ ಊಟದ ವ್ಯವಸ್ಥೆ ಮತ್ತು ರಾತ್ರಿ ತಂಗಲು ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಒದಗಿಸಲಾಗಿದ್ದು, ವೈದ್ಯರ ತಂಡದಿಂದ ಆರೋಗ್ಯ ಪರಿಶೀಲನೆ ಮತ್ತು ಅಗತ್ಯವಿರುವ ಔಷಧ ಸೌಲಭ್ಯವನ್ನು ಒದಗಿಸಲಾಗಿದೆ. ವ್ಯಾಪಕ ಮಳೆಯಾಗುತ್ತಿರುವ ಪ್ರದೇಶಗಳು ಸೇರಿದಂತೆ ಜಿಲ್ಲೆಯಾದ್ಯಂತ ಕಂದಾಯ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು 24×7 ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ,ಅಗತ್ಯ ನೆರವು ಒದಗಿಸುವಂತೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಅಘನಾಶಿನಿ ಮತ್ತು ಶರಾವತಿ ನದಿಗಳು ತುಂಬಿ ಹರಿಯುತ್ತಿದ್ದು ಈ ಭಾಗದಲ್ಲಿ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವವರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಿದ್ದು , ಈ ಪ್ರದೇಶಗಳ ಮೇಲೆ ನಿರಂತರ ನಿಗಾವಹಿಸಲಾಗಿದೆ. ಕಾಳಿ ನದಿಯಲ್ಲಿನ ಅಪ್ಪರ್ ಕಾನೇರಿ ಅಣೆಕಟ್ಟೆಯಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕ ಕ್ರಮವಾಗಿ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವರಿಗೆ ಸರ‍್ಷಕಿತ ಸ್ಥಳಗಳಿಗೆ ತೆರಳಲು ಈಗಾಗಲೇ ಸೂಚಿಸಲಾಗಿದೆ.
ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ಮಾನವ ಜೀವ ಹಾನಿಯಾಗದಂತೆ ಎಲ್ಲಾ ರೀತಿಯ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಎಲ್ಲಾ ಅಧಿಕಾರಿಗಲಿಗೆ ಸೂಚಿಸಲಾಗಿದ್ದು, ಜಾನುವಾರು ಪ್ರಾಣ ಹಾನಿ ತಡೆಗೂ ಅಗ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದು, ಸಾರ್ವಜನಿಕರು ಯಾವುದೇ ಸಮಸ್ಯೆಗಳಲ್ಲಿ ಉಚಿತ ತುರ್ತ ಸಹಾಯವಾಣಿ ಸಂಖ್ಯೆ 1077 ಗೆ ಹಾಗೂ ಮೊ.ಸಂ. ಸಂಖ್ಯೆ 9483511015 ಕರೆ , ಮೆಸೆಜ್, ವಾಟ್ಪಾಪ್ ಸಂದೇಶ ಮತ್ತು ವಾಟ್ಸಾಪ್ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.
—–