Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಲಂಡನ್: ಬೂಕರ್ ಪ್ರಶಸ್ತಿ ಆಯಪಟ್ಟಿಯಲ್ಲಿ ಹಿರಿಯ ಸಾಹಿತಿ ಬಾನು ಮುಷ್ಕಾಕ್ ಕೃತಿ - Karnataka Kahale

ಲಂಡನ್: ಬೂಕರ್ ಪ್ರಶಸ್ತಿ ಆಯಪಟ್ಟಿಯಲ್ಲಿ ಹಿರಿಯ ಸಾಹಿತಿ ಬಾನು ಮುಷ್ಕಾಕ್ ಕೃತಿ

ಲಂಡನ್,ಫೆ.೨೬: ಕನ್ನಡದ ಖ್ಯಾತ ಸಾಹಿತಿ ಬಾನು ಮುಸ್ತಾಕ್ ಅವರ ಸಣ್ಣಕತೆಗಳ ಅನುವಾದಿತ ಸಂಕಲನ ‘ಹಾರ್ಟ್ ಲ್ಯಾಂಪ್’ ಪ್ರತಿಷ್ಠಿತ ಅಂತ‌ ರಾಷ್ಟ್ರೀಯ ಬೂಕರ್ ಪುರಸ್ಕಾರಕ್ಕೆ ಪರಿಗಣನೆಗೆ ಸಿದ್ಧವಾಗಿರುವ ಪಟ್ಟಿಯಲ್ಲಿ ಸೇರ್ಪಡೆಗೊಂಡಿದೆ.
ಈ ಕುರಿತು ವಾರ್ತಾಭಾರತಿ ಕನ್ನಡ ದಿನ ಪತ್ರಿಕೆ ವರದಿ ಮಾಡಿದೆ.
ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು ಕಥಾಸಂಕಲನವನ್ನು ದೀಪಾ ಭಸ್ವಿ ಅವರು ‘ಹಾರ್ಟ್ ಲ್ಯಾಂಪ್’ ಶೀರ್ಷಿಕೆ ಯೊಂದಿಗೆ ಇಂಗ್ಲಿಷ್ ಅನುವಾದಿಸಿದ್ದರು.
ಕನ್ನಡ’ ಭಾಷೆಯು ಕೃತಿಯೊಂದು ಬೂಕರ್ ಸ್ಪರ್ಧೆಗೆ ಪ್ರವೇಶ ಪಡೆದಿರುವುದು ಇದೇ ಮೊದಲ ಸಲ ವಾಗಿದೆ. ಕುಟುಂಬ ಹಾಗೂ ಸಮುದಾಯದ ತುಮುಲಗಳನ್ನು ಹೃದಯಸ್ಪರ್ಶಿಯಾಗಿ ಪ್ರಾದೇಶಿಕ ಸೊಗಡಿನೊಂದಿಗೆ ಮುಸ್ತಾಕ್ ಅವರ ಕಥೆಗಳು ಕಟ್ಟಿಕೊಟ್ಟಿವೆ ಎಂದು ತೀರ್ಪುಗಾರರು ತಿಳಿಸಿದ್ದಾರೆ.
೫೦ ಸಾವಿರ ಪೌಂಡ್ ( ಸುಮಾರು ೫೫ ಲಕ್ಷ ರೂ.) ಮೊತ್ತದ ಬೂಕರ್ ಪ್ರಶಸ್ತಿಗೆ ಪರಿಗಣನೆಯ ಪಟ್ಟಿಯಲ್ಲಿ ಒಟ್ಟು ೧೩ ಕೃತಿಗಳು ಪ್ರವೇಶಪಡೆದಿವೆ.
ಅಂತಿಮ ಸುತ್ತಿಗೆ ಪ್ರವೇಶ ಪಡೆಯುವ ೬ ಕೃತಿಗಳ ಪೈಕಿ ಒಂದನ್ನು ಬೂಕರ್ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು, ಎಪ್ರಿಲ್ ೮ರಂದು ಬೂಕರ್ ಪುರಸ್ಕಾರ ಘೋಷಣೆಯಾಗಲಿದೆ.