ಬಳ್ಳಾರಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಳ್ಳಾರಿ ಜಿಲ್ಲಾ ಸಮಿತಿ ಸೋಮವಾರ ಬೆಳಿಗ್ಗೆ 10.30 ಕ್ಕೆ ನಗರದ ಹಳೇ ಡಿಸಿ ಕಚೇರಿ ಆವರಣದ ಗಾಂಧಿ ಭವನದಲ್ಲಿ 2025 ನೇ ಸಾಲಿನ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಿದೆ.
ಕಾರ್ಯಕ್ರಮವನ್ನು ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಅವರು
ಉದ್ಘಾಟಿಸುವರು. ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಅಧ್ಯಕ್ಷತೆವಹಿಸುವರು.
ಮಾಧ್ಯಮ ಕ್ಷೇತ್ರದಲ್ಲಿ ಪ್ರಚಲಿತ ವಿದ್ಯಮಾನಗಳ ಕುರಿತು ದಾವಣಗೆರೆ ವಿವಿಯ ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪ್ರಾಧ್ಯಾಪಕ ಡಾ. ಶಿವಕುಮಾರ ಕಣಸೋಗಿ ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅಥಿತಿಗಳಾಗಿ ನಗರ ಶಾಸಕ ನಾರಾ ಭರತ್ ರೆಡ್ಡಿ, ವಿಧಾನ ಪರಿಷತ್ ಸದಸ್ಯ ವೈ.ಎಂ.ಸತೀಶ್, ಮೇಯರ್ ಮುಲ್ಲಂಗಿ ನಂದೀಶ್ ಆಗಮಿಸಲಿದ್ದು.
ವಿಶೇಷ ಆಹ್ವಾನಿತರಾಗಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕಶ, ಕಾರ್ಯದರ್ಶಿ ಸೋಮಶೇಖರ ಕೆರಗೋಡು, ಡಿಸಿ ಪ್ರಶಾಂತ್ ಕುಮಾರ್ ಮಿಶ್ರ, ಎಸ್ಪಿ ಡಾ.ಶೋಭಾರಾಣಿ ವಿ.ಜೆ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕರಾಮ್ ಉಪಸ್ಥಿತರಿರುವರು.
ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಎನ್ .ವೀರಭದ್ರಗೌಡ ಪ್ರಾಸ್ತಾವಿಕವಾಗಿ ಮಾತನಾಡುವರು. ಎಂದು ಸಂಘದ ಅಡಾಕ್ ಸಮಿತಿಯ ಸದಸ್ಯರಾದ ಕೆ.ಮಲ್ಲಯ್ಯ ಮೋಕ, ವೆಂಕೋಬಿ ಸಂಗನಕಲ್ಲು ತಿಳಿಸಿದ್ದಾರೆ.
ಪ್ರತಿಭಾ ಪುರಸ್ಕಾರ: ಇದೇ ಸಂದರ್ಭದಲ್ಲಿ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿಯಲ್ಲಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಪತ್ರಿಕಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ತಂಡಗಳಿಗೆ ಟ್ರೋಪಿ ವಿತರಿಸಲಾಗುವುದು.