Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಬಳ್ಳಾರಿ: ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ರೂ.ಗಳ ಚೆಕ್ ವಿತರಿಸಿದ ಶಾಸಕ ನಾರಾ ಭರತ್ ರೆಡ್ಡಿ - Karnataka Kahale

ಬಳ್ಳಾರಿ: ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ರೂ.ಗಳ ಚೆಕ್ ವಿತರಿಸಿದ ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ, ಆ.5:  ಇಲ್ಲಿನ ಬಾಪೂಜಿ ನಗರದಲ್ಲಿ ಇತ್ತೀಚೆಗೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದ ಬಾಲಕ ವಿಕ್ಕಿ (3) ಕುಟುಂಬಸ್ಥರಿಗೆ ನಗರ ಶಾಸಕ ನಾರಾ ಭರತ್ ರೆಡ್ಡಿ ಮಹಾನಗರ ಪಾಲಿಕೆಯ ವತಿಯಿಂದ 5 ಲಕ್ಷ ರೂ.ಗಳ ಚೆಕ್ ವಿತರಿಸಿದರು. ಇನ್ನುಳಿದಂತೆ ಅಪಘಾತ ವಿಮೆಯ ಪರಿಹಾರ 5 ಲಕ್ಷ ರೂ.ಗಳು ಹಾಗೂ ಸಿಎಂ ಪರಿಹಾರ ಧನ ಸಹಾಯ ಅಡಿ 3 ಲಕ್ಷ ರೂ.ಗಳು ಸೇರಿದಂತೆ ಒಟ್ಟು 13 ಲಕ್ಷ ರೂ.ಗಳ ಪರಿಹಾರ ಒದಗಿಸಲಾಗುವುದು ಎಂದರು.
ಮಂಗಳವಾರ ಸಂಜೆ ಮೃತ ಬಾಲಕನ ಮನೆಗೆ ತೆರಳಿ ಚೆಕ್ ವಿತರಿಸಿದರು. ಇದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
ಮಹಾನಗರ ಪಾಲಿಕೆಯ ಕಸ ಸಂಗ್ರಹ ವಾಹನದ ಚಾಲಕನ ನಿರ್ಲಕ್ಷ್ಯದಿಂದ ಘಟನೆ ನಡೆದಿತ್ತು, ಬಾಲಕನ ಕುಟುಂಬಕ್ಕೆ ಪಾಲಿಕೆಯ ವತಿಯಿಂದ 5 ಲಕ್ಷ ರೂ.ಗಳ ಚೆಕ್ ಕೊಡುತ್ತಿದ್ದೇವೆ, ಅದೇ ರೀತಿ ಸಿಎಂ ಪರಿಹಾರ ಧನ ಅಡಿ 3 ಲಕ್ಷ ರೂ.ಗಳನ್ನು ನೀಡಲಾಗುವುದು, ಅಪಘಾತ ವಿಮೆಯ ಪರಿಹಾರ 5 ಲಕ್ಷ ರೂ.ಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು, ಎಷ್ಟೇ ಪರಿಹಾರ ಕೊಟ್ಟರೂ ಹೋದ ಜೀವ ಬರುವುದಿಲ್ಲ, ಕುಟುಂಬಸ್ಥರಿಗೆ ಮಗುವಿನ ಸಾವಿನ ನೋವು ತಡೆದುಕೊಳ್ಳುವ ಶಕ್ತಿ ಸಿಗಲಿ ಎಂದರು.
ಇದೇ ಸಂದರ್ಭದಲ್ಲಿ ಸ್ಥಳೀಯ ಮುಖಂಡ ಸತೀಶ್ ಎಂಬುವವರು ವೈಯಕ್ತಿಕವಾಗಿ ನೀಡಿದ 25 ಸಾವಿರ ರೂ.ಗಳ ಪರಿಹಾರವನ್ನು ಶಾಸಕ ನಾರಾ ಭರತ್ ರೆಡ್ಡಿ ನೀಡಿದರು.
ಮೃತ ಬಾಲಕನ ಕುಟುಂಬದ ಸದಸ್ಯರೊಬ್ಬರಿಗೆ ಮಹಾನಗರ ಪಾಲಿಕೆಯಲ್ಲಿ ಉದ್ಯೋಗ ಕೊಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ಅದ್ಧೂರಿ ಸಾಹಿತ್ಯ ಸಮ್ಮೇಳನ ಆಯೋಜನೆ: ಮಾಧ್ಯಮದವರ ಪ್ರಶ್ನೆ ಒಂದಕ್ಕೆ ಉತ್ತರಿಸಿದ ಶಾಸಕ ನಾರಾ ಭರತ್ ರೆಡ್ಡಿ ಅವರು, ಗಡಿ ಭಾಗದಲ್ಲಿರುವ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಕನ್ನಡದ ಹಬ್ಬ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಏರ್ಪಡಿಸುವ ಅವಕಾಶ ನಮ್ಮದಾಗಲಿ ಅಂತಾನೇ ನಾವೆಲ್ಲ ಜನಪ್ರತಿನಿಧಿಗಳು ಪ್ರಯತ್ನ ಪಟ್ಟಿದ್ದೇವೆ, ಅದೇ ರೀತಿ ಸಮ್ಮೇಳನವನ್ನು ಅದ್ಧೂರಿಯಾಗಿ ಅರ್ಥಪೂರ್ಣವಾಗಿ ಏರ್ಪಡಿಸಲಾಗುವುದು ಎಂದರು.
ಪ್ರತಿಭಟನೆ ಮಾಡಿದ್ದ ಬಿಜೆಪಿಯವರ ವಿರುದ್ಧ ಪೊಲೀಸ್ ಕ್ರಮ ಜರುಗಿಸಲಾಗುತ್ತಿದೆ ಎಂಬ ಬಿಜೆಪಿಯ ಮುಖಂಡರ ಆರೋಪಕ್ಕೆ ಪ್ರತಿಕ್ರಿಯಿಸಿದ ಶಾಸಕ ನಾರಾ ಭರತ್ ರೆಡ್ಡಿ, ಪ್ರಜಾಪ್ರಭುತ್ವದ ಅಸ್ತಿತ್ವವೇ ಪ್ರತಿಭಟನೆಯಲ್ಲಿದೆ, ವಿಪಕ್ಷದವರ ಧ್ವನಿ ಅಡಗಿಸುವ ಜಾಯಮಾನ ನನ್ನದಲ್ಲ, ಹಾಗೆ ಆಲೋಚಿಸಿದ್ದರೆ ಪ್ರತಿಭಟನೆಗೇ ಅವಕಾಶ ಕೊಡುತ್ತಿದ್ದಿಲ್ಲ ಎಂದರು.
ಈ ಸಂದರ್ಭದಲ್ಲಿ ಪಾಲಿಕೆಯ ಆಯುಕ್ತ ಖಲೀಲಸಾಬ, ಮುನಾಫ್ ಪಟೇಲ್, ಸದಸ್ಯರಾದ ಎಂ.ಪ್ರಭಂಜನಕುಮಾರ್, ಕಾಂಗ್ರೆಸ್ ಮುಖಂಡರಾದ ಶಿವರಾಜ್, ಸೂರಿ, ಹೊನ್ನಪ್ಪ, ಹಗರಿ ಗೋವಿಂದ, ಬಾಪೂಜಿ ನಗರ ವೆಂಕಟೇಶ, ಚಾನಾಳ್ ಶೇಖರ್, ಸತೀಶ್, ಪ್ರೇಮ್, ಭರತ್, ಬಾಲರಾಜು, ಬುಜ್ಜಿ ಮೊದಲಾದವರು ಇದ್ದರು.