Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಚಿತ್ರದುರ್ಗದ ನಾಯಕನಹಟ್ಟಿಯಲ್ಲಿ ಮಿಂಚಿದ ಬಳ್ಳಾರಿ ‌ರಂಗ ಪ್ರತಿಭೆಗಳು: 'ದನ ಕಾಯೋರ ದೊಡ್ಡಾಟ' ನೋಡಿ ನಕ್ಕು ನಲಿದ ಪ್ರೇಕ್ಷಕರು! - Karnataka Kahale

ಚಿತ್ರದುರ್ಗದ ನಾಯಕನಹಟ್ಟಿಯಲ್ಲಿ ಮಿಂಚಿದ ಬಳ್ಳಾರಿ ‌ರಂಗ ಪ್ರತಿಭೆಗಳು: ‘ದನ ಕಾಯೋರ ದೊಡ್ಡಾಟ’ ನೋಡಿ ನಕ್ಕು ನಲಿದ ಪ್ರೇಕ್ಷಕರು!

ಚಿತ್ರದುರ್ಗ, ಸೆ.3: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸೂಫಿ ಸಂತರ ಭಾವೈಕ್ಯತೆಯ ನಾಡು ನಾಯಕನಹಟ್ಟಿ ಗ್ರಾಮದ ಬಿಳೆಕಲ್ಲು ಗೆಳೆಯರ ಬಳಗದ ವತಿಯಿಂದ 33ನೇ ವರ್ಷದ ಶಕ್ತಿ ಗಣಪತಿ ಮಹೋತ್ಸವ ಭವ್ಯವಾಗಿ ಜರುಗಿತು.          ಈ ಸಂಭ್ರಮದಲ್ಲಿ ಬಳ್ಳಾರಿಯ ಹಂದ್ಯಾಳ್ ಶ್ರೀ ಮಹಾದೇವ ತಾತ  ಕಲಾ ಸಂಘದ ಕಲಾವಿದರು ಪ್ರದರ್ಶಿಸಿದ   ಕೀರ್ತಿಶೇಷ ಶಂಕರ ನಾಯ್ಡು ಅವರ ಕೃತಿ ‘ದನ ಕಾಯುವರ ದೊಡ್ಡಟ’ ಹಾಸ್ಯ ನಾಟಕ ನೆರೆದಿದ್ದ ನೂರಾರು ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿತು.

ಅಕ್ಷರಜ್ಞಾನದ ಮಹತ್ವವನ್ನು ಮನರಂಜನಾತ್ಮಕ ರೀತಿಯಲ್ಲಿ ತಲುಪಿಸಿದ ಈ ನಾಟಕ, ಸಾಕ್ಷರತಾ ಸಂದೇಶವನ್ನು ಜನಮನದಲ್ಲಿ ಬಿತ್ತುವಲ್ಲಿಯೂ ಯಶ ಕಂಡಿತು.

ಪಾತ್ರ ನಿರ್ವಹಣೆ: ಸಾರಥಿಯಾಗಿ ಹಿರಿಯ ರಂಕಲಾವಿದ ಪುರುಷೋತ್ತಮ ಹಂದ್ಯಾಳು,  ಗಣಪತಿಯಾಗಿ ದಾನಯ್ಯಸ್ವಾಮಿ, ದುರ್ಯೋಧನನಾಗಿ ಅಂಬರೀಶ್ ಹಚ್ಚೊಳ್ಳಿ, ದುಶ್ಯಾಸನನಾಗಿ ಪಾರ್ವತೀಶ ಗೆಣಿಕೆಹಾಳ್, ದ್ರೌಪದಿ ಮತ್ತು ನೃತ್ಯಗಾರ್ತಿಯಾಗಿ ಮೌನೇಶ್ ಕಲ್ಲಳ್ಳಿ, ನಕುಲ-ಸಹದೇವರಾಗಿ ಗುರು ಮೋಕ ಮತ್ತು ಲಿಂಗಪ್ಪ ಹಂದ್ಯಾಳು, ಕೃಷ್ಣನಾಗಿ ಕುಮಾರಗೌಡ ಅಮರಪುರ, ಕಥಾಸಂಚಾಲಕರಾಗಿ ಸುಂಕಣ್ಣ ಹೊಸಯರಗುಡಿ .
ರುದ್ರಮುನಿ ಸ್ವಾಮಿ ಪ್ರೇಕ್ಷಕರನ್ನು ರಂಜಿಸಿದರು.


🎶 ಸಂಗೀತ ಸಾಥ್: ಎರ್ರಿಸ್ವಾಮಿ ಆಚಾರ್ ಅವರು ಹಾರ್ಮೋನಿಯಂನಲ್ಲಿ, ಗಾದಿಲಿಂಗಪ್ಪ ಅಮರಾಪುರ ತಬಲಾದಲ್ಲಿ ಕಲಾವಿದರಿಗೆ ಸಂಗೀತಸಾಥ್ ನೀಡಿದರು.
ಜನಸಂದಣಿಯಲ್ಲಿ ನಡೆದ ಈ ನಾಟಕವು ಮನರಂಜನೆ ಮತ್ತು ಸಂದೇಶ ಎರಡನ್ನೂ ಒಟ್ಟಿಗೆ ನೀಡುವಲ್ಲಿ ಯಶಸ್ವಿಯಾಯಿತು.