Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಇಸ್ರೇಲ್ ಬೆಳವಣಿಗೆ ವಾಸ್ತವ ಅರಿಯಲು ಭಾರತೀಯ ಪತ್ರಕರ್ತರ ನಿಯೋಗಕ್ಕೆ ಆಹ್ವಾನ -ಇಸ್ರೇಲ್ ಕಾನ್ಸಲೇಟರ್ ಹಾರ್ಲಿವೈಟ್ಸ್ ಮೆನ್ - Karnataka Kahale

ಇಸ್ರೇಲ್ ಬೆಳವಣಿಗೆ ವಾಸ್ತವ ಅರಿಯಲು ಭಾರತೀಯ ಪತ್ರಕರ್ತರ ನಿಯೋಗಕ್ಕೆ ಆಹ್ವಾನ -ಇಸ್ರೇಲ್ ಕಾನ್ಸಲೇಟರ್ ಹಾರ್ಲಿವೈಟ್ಸ್ ಮೆನ್

ಜೇರುಸಲೇಂ: ಇಸ್ರೇಲ್ ನಲ್ಲಿ ನಡೆದಿರುವ ಬೆಳವಣಿಗೆ ಮತ್ತು ವಾಸ್ತವ ಸಂಗತಿಗಳನ್ನು ಹೊರ ಜಗತ್ತಿಗೆ ತಿಳಿಸುವ ನಿಟ್ಟಿನಲ್ಲಿ ಇಸ್ರೇಲ್ ಗೆ ಭಾರತೀಯ ಪತ್ರಕರ್ತರ ನಿಯೋಗವನ್ನು ಆಹ್ವಾನಿಸಲಾಗಿತ್ತು ಎಂದು ಇಸ್ರೇಲ್ ಕಾನ್ಸಲೇಟರ್ ಹಾರ್ಲಿವೈಟ್ಸ್ ಮೆನ್ ತಿಳಿಸಿದರು.

ಇದೇ ಸಂದರ್ಭದಲ್ಲಿ ಹಾರ್ಲಿವೈಟ್ಸ್ ಮೆನ್ ಅವರನ್ನು  ದಕ್ಷಿಣ ಭಾರತೀಯ ಪತ್ರಕರ್ತರ ತಂಡದ ಪರವಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಸನ್ಮಾನಿಸಿ ಗೌರವಿಸಿದರು.
ಸನ್ಮಾನ ಸ್ವೀಕಾರಿಸಿ ಮಾತನಾಡಿದ  ಹಾರ್ಲಿವೈಟ್ಸ್ ಮೆನ್  ಅವರು, ಇಸ್ರೇಲ್ ದೇಶ ಭಯೋತ್ಪಾದನೆ ವಿರುದ್ದ ಎದುರಿಸುತ್ತಿರುವ ಸವಾಲು, ಗಡಿ ಸಮಸ್ಯೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸತ್ಯದ ಸಂಗತಿಗಳನ್ನು ತಿಳಿಯಲಿ ಎನ್ನುವುದು ಈ ಪ್ರವಾಸದ ಆಶಯವಾಗಿತ್ತು ಎಂದರು.
ಸುವರ್ಣ ಟಿವಿ ಅಸೋಶಿಯೇಟ್ ಎಡಿಟರ್ ಪ್ರಶಾಂತ ನಾತು ಅವರು, ಇಸ್ರೇಲ್ ಅಧ್ಯಯನಶೀಲ ಪ್ರವಾಸ ಅನೇಕ ಸತ್ಯ ಸಂಗತಿಗಳನ್ನು ತಿಳಿಯಲು ಅನುಕೂಲವಾಯಿತು ಎಂದು ತಿಳಿಸಿ, ಇಸ್ರೇಲ್ ಅಂಬಾಸಿಡರ್ ಸೇರಿದಂತೆ ಎಲ್ಲ ಸಂಬಂದಿಸಿದ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದರು.
ಈ ಸಂದರ್ಭದಲ್ಲಿ ಇಸ್ರೇಲ್ ಕಾನ್ಸಲೆಟ್ ಪಿಆರ್ ರವಿಕಿರಣ್, ಹಿರಿಯ ಪತ್ರಕರಾದ ಚೀ.ಜ.ರಾಜೀವ್, ಮಧುನಾಯಕ್, ರಮೇಶ್ ಕುಮಾರ್ ನಾಯಕ್, ಬಸವರಾಜು, ಹರೀಶ್ ಉಪಾದ್ಯಾಯ, ತಮಿಳುನಾಡು, ಕೇರಳ, ತೆಲಂಗಾಣ, ಆಂಧ್ರ ಪತ್ರಕರ್ತರು ಹಾಜರಿದ್ದರು .