ಬೆಂಗಳೂರು ವರದಿಗಾರರ ಕೂಟದ ಸುವರ್ಣ ಮಹೋತ್ಸವ-55 ಲಾಂಛನ ಬಿಡುಗಡೆ ಮಾಡಿ ಶುಭ ಹಾರೈಸಿದ ಸಿಎಂ


ಬೆಂಗಳೂರು, ನ.7: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಬೆಂಗಳೂರು ವರದಿಗಾರರ ಕೂಟದ ಸುವರ್ಣ ಮಹೋತ್ಸವ-55 ಲಾಂಛನವನ್ನು ಬಿಡುಗಡೆ ಮಾಡಿದರು.

ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ ದಲ್ಲಿ ಜರುಗಿದ ಸರಳ ಕಾರ್ಯಕ್ರಮದಲ್ಲಿ ಲಾಂಛನ ಬಿಡುಗಡೆ ಮಾಡಿ ವರದಿಗಾರರ ಕೂಟಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವರದಿಗಾರರ ಕೂಟದ ಅಧ್ಯಕ್ಷ ಆರ್.ಟಿ.ವಿಠ್ಠಲಮೂರ್ತಿ, ಪ್ರಧಾನ ಕಾರ್ಯದರ್ಶಿ ಹೆಚ್.ವಿ.ಕಿರಣ್ ಮತ್ತು ಪದಾಧಿಕಾರಿಗಳು,
ವರದಿಗಾರರು ಉಪಸ್ಥಿತರಿದ್ದರು.