ಗಿರೀಶ್ ಕುಮಾರ್.ಜಿ ಗೆ ಪಿಎಚ್ ಡಿ ಪದವಿ ಘೋಷಣೆ

ಬಳ್ಳಾರಿ, ನ. 12: ನಗರದ ಪತ್ರಕರ್ತ ಗಿರೀಶ್ ಕುಮಾರ್.ಜಿ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿಎಚ್ ಡಿ ಪದವಿ ಘೋಷಿಸಿದೆ.

ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಕ್ಕೆ  ಡಾ. ನಾಗೇಂದ್ರ ಅವರ ಮಾರ್ಗದರ್ಶನಲ್ಲಿ  ಸಲ್ಲಿಸಿದ ‘ಕನ್ನಡ ಮುದ್ರಣ ಮಾಧ್ಯಮಗಳಲ್ಲಿ ಸೈಬರ್ ಅಪರಾಧಗಳ ಪ್ರತಿನೀಧಿಕರಣ ( ಬಳ್ಳಾರಿ ಜಿಲ್ಲೆಯ ಅನುಲಕ್ಷಿಸಿ)’  ಮಹಾ ಪ್ರಬಂಧಕ್ಕೆ ಪಿಎಚ್.ಡಿ ಪದವಿ ನೀಡಲಾಗಿದೆ ಎಂದು ಕನ್ನಡ ವಿಶ್ವವಿದ್ಯಾಲಯ ಕುಲಸಚಿವರಾದ ಡಾ.ವಿಜಯ್ ಪೂಣಚ್ಚ ತಂಬಂಡ ಅವರು ಅಧಿಸೂಚನೆ ಹೊರಡಿಸಿದ್ದಾರೆ.

ಪರಿಚಯ:ಮೂಲತಃ ಕಂಪ್ಲಿ ತಾಲೂಕಿನ ನಂಬರ್ 1. ಇಟಿಗಿ ಗ್ರಾಮದ, ಪ್ರಸ್ತುತ ಬಳ್ಳಾರಿ ನಗರದ ಕಪ್ಪಗಲ್ಲು ರಸ್ತೆಯ ಕೋಟೇಶ್ ಲೇಔಟ್ ನಿವಾಸಿಗಳಾದ ನಿವೃತ್ತ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಗೌಡ್ರು ದೊಡ್ಡ ಹನುಮಂತಪ್ಪ ಮತ್ತು ನಾಗರತ್ನ ದಂಪತಿಗಳ ಪುತ್ರ ಗಿರೀಶ್ ಕುಮಾರ್ ಹೊಸಪೇಟೆ ಟೈಮ್ಸ್‌  ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಳ್ಳಾರಿ, ಕೊಪ್ಪಳ‌ವಿವಿಯ ಸ್ನಾತಕೋತ್ತರ ಮತ್ತು ಸ್ನಾತಕ ಪತ್ರಿಕೋದ್ಯಮ ವಿಭಾಗದ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ್ದಾರೆ.

ಪಿಎಚ್.ಡಿ ಸಾರಾಂಶ: ಕನ್ನಡ ಮುದ್ರಣ ಮಾಧ್ಯಮಗಳಲ್ಲಿ ಸೈಬರ್ ಅಪರಾಧಗಳ ಪ್ರತಿನೀಧಿಕರಣ (ಬಳ್ಳಾರಿ ಜಿಲ್ಲೆಯ ಅನುಲಕ್ಷಿಸಿ : ಬಳ್ಳಾರಿ ವಿಜಯನಗರ ಜಿಲ್ಲೆ) ಎಂಬ ವಿಷಯದ ಸಂಶೋಧನೆ ಕರ್ನಾಟಕ ರಾಜ್ಯದ ಕನ್ನಡದ ಮೊದಲ ಸಂಶೋಧನೆ ಮಹಾಪ್ರಬಂಧವಾಗಿದೆ.
ಈ ವಿಷಯದ ಕುರಿತು 2019 ರಿಂದ 2022 ಅವಧಿ ವರೆಗೆ ಅಧ್ಯಯನ ಮಾಡಿ, ಸೈಬರ್ ಅಪರಾಧಗಳ ಬಳ್ಳಾರಿ ಜಿಲ್ಲಾ ಪಕ್ಷೀನೋಟ, ಸೈಬರ್ ಅಪರಾಧಗಳ ಹುಟ್ಟು, ಬೆಳವಣಿಗೆ, 4 ವರ್ಷಗಳ ಸೈಬರ್ ಅಪರಾಧಗಳ ಅಂಕಿ, ಸಂಖ್ಯೆಗಳು, ಪೈ ಮತ್ತು ಸ್ತಂಭ ನಕ್ಷೆಗಳು ಒಳಗೊಂಡಿದೆ. ಮುಖ್ಯವಾಗಿ ವಿಜಯ ಕರ್ನಾಟಕ ಮತ್ತು ವಿಜಯವಾಣಿ ದಿನಪತ್ರಿಕೆ ಹಾಗು ಮೈಸೂರಿನ ಪ್ರತಿನಿಧಿ ದಿನಪತ್ರಿಕೆಗಳಲ್ಲಿ ಬರಹ, ಲೇಖನ, ಅಂಕಣಗಳು ವಿಶೇಷ ವಿಶ್ಲೇಷಣೆ, ಸೈಬರ್ ಅಪರಾಧಗಳ ಬಗ್ಗೆ ಕರ್ನಾಟಕ ರಾಜ್ಯದ ಪೋಲಿಸ್ ಇಲಾಖೆಯ ಐ.ಪಿ.ಎಸ್, ಸಿ.ಪಿ.ಐ, ಪಿ.ಎಸ್.ಐ ಅಧಿಕಾರಿಗಳು, ಹಿರಿಯ ಪತ್ರಕರ್ತರು, ಸೈಬರ್ ತಜ್ಞರು, ವಂಚನೆ ಒಳಗಾದವರ ಸಂರ್ದಶನ ಮತ್ತು ವಿಶ್ಲೇಷಣೆ ಮತ್ತು ಅವರ ಮಾನಸಿಕ  ಸ್ಥಿತಿಗತಿ ಬಗ್ಗೆ ಈ ಸಂಶೋಧನೆ ಒಳಗೊಂಡಿದೆ ಎಂದು ಗಿರೀಶ್ ಕುಮಾರ್ ವಿವರಿಸಿದ್ದಾರೆ.