ಗೃಹರಕ್ಷಕರ ರಾಜ್ಯಮಟ್ಟದ ವೃತ್ತಿಪರ ಹಾಗೂ ಕ್ರೀಡಾಕೂಟ: ಚಾಂಪಿಯನ್‌ಶಿಪ್ ಬಳ್ಳಾರಿ ತಂಡಕ್ಕೆ ಟ್ರೋಫಿ ವಿತರಿಸಿದ ಎಡಿಜಿಪಿ‌ ಎಂ. ನಂಜುಂಡಸ್ವಾಮಿ(ಮನಂ)

ಬಳ್ಳಾರಿ,ನ.25: ಬೆಂಗಳೂರಿನ ಬನ್ನೇರುಘಟ್ಟದ ಮುಂಡ್ಕೂರ್ ತರಬೇತಿಯ ಅಕಾಡೆಮಿ ಮೈದಾನದಲ್ಲಿ ಶುಕ್ರವಾರ ನಡೆದ 2025-26ನೇ ಸಾಲಿನ ಗೃಹರಕ್ಷಕರ ರಾಜ್ಯಮಟ್ಟದ ವೃತ್ತಿಪರ ಹಾಗೂ ಕ್ರೀಡಾಕೂಟಗಳಲ್ಲಿ ಬಳ್ಳಾರಿ ಜಿಲ್ಲೆಯ ಕ್ರೀಡಾಪಟುಗಳ ತಂಡ ಚಾಂಪಿಯನ್‌ಶಿಪ್ ಕಪ್ ಮುಡಿಗೇರಿಸಿಕೊಂಡಿದೆ.
ಅಂದು ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಎಡಿಜಿಪಿ ಹಾಗೂ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಹೆಚ್ಚುವರಿ ಮಹಾ ನಿರ್ದೇಶಕರಾದ ಎಂ. ನಂಜುಂಡಸ್ವಾಮಿ(ಮನಂ) ಅವರು ಟ್ರೋಫಿ ವಿತರಿಸಿದರು.
ಈಶಾನ್ಯ ವಲಯದ ವೃತ್ತಿಪರ ಕ್ರೀಡೆಗಳಾದ ರೈಫಲ್ ಡ್ರಿಲ್, ರಕ್ಷಣೆಯಲ್ಲಿ ಪುರುಷರ ವಿಭಾಗವು ಪ್ರಥಮ ಸ್ಥಾನ ಮತ್ತು ಮಹಿಳಾ ವಿಭಾಗವು ಪ್ರಥಮ ಚಿಕಿತ್ಸೆಯಲ್ಲಿ ಪ್ರಥಮ ಸ್ಥಾನ ಮತ್ತು ರೈಫಲ್‌ಡ್ರಿಲ್ ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ನ.16 ರಿಂದ 21 ರವರೆಗೆ ನಡೆದ ಕ್ರೀಡಾಕೂಟಗಳಲ್ಲಿ ಕ್ರೀಡೆಗಳಾದ 100 ಮೀ. ಓಟ, 400 ಮೀ. ಓಟ, 800 ಮೀ. ಓಟ, ಉದ್ದ ಜಿಗಿತ, ಎತ್ತರ ಜಿಗಿತ ಮತ್ತು ವೃತ್ತಿಪರ ಕ್ರೀಡೆಗಳಾದ ಪ್ರಥಮ ಚಿಕಿತ್ಸೆ, ಆಗ್ನಿಶಮನ, ರೈಫಲ್ ಡ್ರಿಲ್, ರಕ್ಷಣೆ ಮತ್ತು ರೈಫಲ್ ಸಹಿತ ಶೂಟಿಂಗ್ ಸ್ಪರ್ಧೆಗಳಲ್ಲಿ ಈಶಾನ್ಯ ವಲಯದ 65 ಜನ ಗೃಹರಕ್ಷಕರು ಭಾಗವಹಿಸಿದ್ದರು.
2025-26ನೇ ಸಾಲಿನ ಗೃಹರಕ್ಷಕ ವೃತ್ತಿಪರ ಹಾಗೂ ಕ್ರೀಡಾಕೂಟದಲ್ಲಿ ಬಳ್ಳಾರಿ ತಂಡವು ಚಾಂಪಿಯನ್‌ಶಿಪ್ ಕಪ್ ಗೆದ್ದ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲೆಯ ಜಿಲ್ಲಾ ಸಮಾದೇಷ್ಟರಾದ ಯಮ್ಮಿಗನೂರು ಶೇಖ್ ಸಾಬು, ಭೋದಕ ಬಸವರಾಜ ಹಗಳಗಾರ, ಸೀನಿಯರ್ ಪ್ಲಟೂನ್ ಕಮಾಂಡರ್ ಬಿ.ಕೆ.ಬಸವಲಿಂಗ, ಪ್ಲಟೂನ್ ಕಮಾಂಡರ್ ಹೆಚ್.ಲಕ್ಷ್ಮಿನಾರಾಯಣ ಮತ್ತು ಗೃಹರಕ್ಷಕ-ಗೃಹರಕ್ಷಕಿಯರು, ಜಿಲ್ಲೆಯ ಎಲ್ಲಾ ಅಧಿಕಾರಿಗಳು ಮತ್ತು ಗೃಹರಕ್ಷಕರು ಅಭಿನಂದನೆ ತಿಳಿಸಿದ್ದಾರೆ.
—–