ಬಳ್ಳಾರಿ ವಲಯ ನೂತನ ಐಜಿಪಿ ಯಾಗಿ ಡಾ.ಪಿ.ಎಸ್ ಹರ್ಷ ಅಧಿಕಾರ ಸ್ವೀಕಾರ

ಬಳ್ಳಾರಿ,ಜ. 7: ಬಳ್ಳಾರಿ ವಲಯ ನೂತನ ಪೊಲೀಸ್ ಮಹಾನಿರೀಕ್ಷಕರಾಗಿ(ಐಜಿಪಿ) ಡಾ.ಪಿ.ಎಸ್ ಹರ್ಷ ಅವರನ್ನು ನೇಮಿಸಿ ಸರ್ಕಾರ ಅದೇಶಿಸಿದ್ದು, ಅವರು ಬುಧವಾರ  ಅಧಿಕಾರ ವಹಿಸಿಕೊಂಡರು.

ಬಳಿಕ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಅವರು, ಕಾನೂನುಬದ್ಧ, ನಿಷ್ಪಕ್ಷಪಾತ ಹಾಗೂ ಕಾನೂನು ಸುವ್ಯವಸ್ಥೆಯನ್ನು ಭದ್ರ-ಬುನಾದಿಯಾಗಿಸಲು ಸರ್ಕಾರ ಮತ್ತು ಹಿರಿಯ ಅಧಿಕಾರಿಗಳ ನಿರ್ದೇಶನ ನೀಡಿದೆ ಎಂದರು.

ಬಳ್ಳಾರಿ ವಲಯದ ಬಳ್ಳಾರಿ, ವಿಜಯನಗರ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳು ಪ್ರಮುಖ ಮತ್ತು ಶಾಂತಿಪ್ರಿಯ ಜಿಲ್ಲೆಗಳಾಗಿದ್ದು, ಕಾನೂನು ಸುವ್ಯವಸ್ಥೆಯನ್ನು ಭದ್ರಗೊಳಿಸಲು ಹಾಗೂ ಜನಸ್ನೇಹಿ ಆಡಳಿತ ನೀಡಲು ಪೊಲೀಸ್ ಇಲಾಖೆ ಬದ್ಧವಾಗಿದೆ ಎಂದು ಹೇಳಿದರು.
—–

Leave a Reply

Your email address will not be published. Required fields are marked *