ಬಳ್ಳಾರಿ,ಜ.12: ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಜ.12 ರಿಂದ 20 ವರೆಗೆ ವಾಣಿಜ್ಯ ಪರೀಕ್ಷೆಗಳು ನಡೆಯಲಿವೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿರ್ಭಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಲೂ ಇರುವ ಜೆರಾಕ್ಸ್ ಸೆಂಟರ್ ಮತ್ತು ಇಂಟರ್ನೆಟ್ ಸೆಂಟರ್ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲು ಆದೇಶಿಸಿದ್ದು, ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.
ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
—–
