
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಬೆಂಗಳೂರು ನಗರ ಜಿಲ್ಲಾ ಘಟಕದ ಆಡಳಿತ ಮಂಡಳಿ ಆಯ್ಕೆಗೆ ನಡೆದ ಚುನಾವಣೆಯಲ್ಲಿ 358 ಪತ್ರಕರ್ತ ಮತದಾರರು ಮತದಾನ ಮಾಡಿದರು.
ನ್ಯಾಯಲಯದ ಆದೇಶದ ಮೇರೆಗೆ ನಡೆದ ಚುನಾವಣೆಯಲ್ಲಿ ಬೆಳಗ್ಗೆ 9 ರಿಂದ ಮದ್ಯಾಹ್ನ 3 ಗಂಟೆ ತನಕ ಕಂದಾಯ ಭವನದ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಮತದಾನ ನಡೆಯಿತು. ಪತ್ರಕರ್ತ ಸದಸ್ಯರು ಉತ್ಸಾಹದಿಂದ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ರಾಜ್ಯ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ವಿಜಯವಾಣಿ ಸಂಪಾದಕರಾದ ಕೆ.ಎನ್.ಚನ್ನೇಗೌಡ, ಡೆಪ್ಯೂಟಿ ಎಡಿಟರ್ ರಾಘವೇಂದ್ರ ಗಣಪತಿ, ವಿಜಯ ಕರ್ನಾಟಕ ಸಂಪಾದಕರಾದ ಸುದರ್ಶನ ಚನ್ನಂಗಿಹಳ್ಳಿ, ಸುದ್ದಿ ಸಂಪಾದಕ ಚೀ.ಜ.ರಾಜೀವ್, ಹಿರಿಯ ಪತ್ರಕರ್ತರಾದ ಜಿ.ಎನ್.ಮೋಹನ್, ಕೆಯುಡಬ್ಲೂೃಜೆ ಮಾಜಿ ಅಧ್ಯಕ್ಷರುಗಳಾದ ಬಿ.ವಿ.ಮಲ್ಲಿಕಾರ್ಜುನಯ್ಯ, ವಿ.ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಖಜಾಂಚಿ ವಾಸುದೇವ ಹೊಳ್ಳ, ಮಹಿಳಾ ಪತ್ರಕರ್ತೆಯರ ಸಂಘದ ಮಾಜಿ ಅಧ್ಯಕ್ಷೆ ಶಾಂತಲಾ ಧರ್ಮರಾಜ್, ಸಂಯುಕ್ತ ಕರ್ನಾಟಕ ಸುದ್ದಿ ಸಂಪಾದಕ ಕೆ.ವಿ.ಪರಮೇಶ್, ಟಿವಿ5 ಸಂಸ್ಥೆ ದಶರಥ್ ಅವರು ಸೇರಿದಂತೆ ಹಲವರು ಮತದಾನ ಮಾಡಿದರು.
ಅವಳಿ ಜವಳಿ ಮಕ್ಕಳ ತಾಯಿ ಅರುಣ ಅವರು ಎಳೆಮಕ್ಕಳ ಜೊತೆಗೆ ಬಂದು ಮತದಾನ ಮಾಡಿದರು.
ಕೆಯುಡಬ್ಲ್ಯೂಜೆ ರಾಜ್ಯ ಮುಖ್ಯ ಚುನಾವಣಾಧಿಕಾರಿಯಾದ ಎನ್.ರವಿಕುಮಾರ್ ಅವರ ಉಸ್ತುವಾರಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ನಂಜುಂಡಪ್ಪ.ವಿ ಅವರು ಮತದಾನ ಪ್ರಕ್ರಿಯೆ ನಡೆಸಿದರು. ಚುನಾವಣೆ ಶಾಂತಿಯುತವಾಗಿ ನಡೆಯಿತು
