ಬುದ್ಧ ಬಸವ ಗಾಂಧಿ ಅಂಬೇಡ್ಕರ್ ಚಿಂತನೆಗಳ ಮಂಥನ  ಅತ್ಯಗತ್ಯ -ಪ್ರೊ.ಎಸ್.ಜಿ.ಸಿದ್ದರಾಮಯ್ಯ

ಶಂಕರಘಟ್ಟ(ಶಿವಮೊಗ್ಗ), ಮಾ.14:  ಇಡೀ ಜಗತ್ತಿಗೆ ಮಾದರಿ ವ್ಯಕ್ತಿತ್ವಗಳಾದ ಬುದ್ದ ಬಸವ ಗಾಂಧಿ ಅಂಬೇಡ್ಕರ್ ಅವರ ಚಿಂತನೆಗಳನ್ನು ಮಂಥನ ಮಾಡುವುದು ಪ್ರಸ್ತುತ ಅತ್ಯಗತ್ಯ ಎಂದು ಖ್ಯಾತ ಸಾಹಿತಿ ಪ್ರೊ ಎಸ್.ಜಿ. ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.                                       ಅವರು ಕುವೆಂಪು ವಿಶ್ವವಿದ್ಯಾಲಯದ ಡಾ. ಅಂಬೇಡ್ಕರ್ ಅಧ್ಯಯನ ಕೇಂದ್ರ, ಸಮಾಜ ಕಲ್ಯಾಣ ಇಲಾಖೆಯ ಅಂಬೇಡ್ಕರ್ ತರಬೇತಿ ಸಂಶೋಧನೆ ಹಾಗೂ ವಿಸ್ತರಣಾ ಕೇಂದ್ರ ಬೆಂಗಳೂರು, ಮತ್ತು ಯು.ಎಸ್.ಆರ್.ಎಂ. ಕಾಲೇಜಿನ ಸಹಯೋಗದಲ್ಲಿ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.                              ಮಹಾ ಮಾನವತಾವಾದಿಗಳಾದ ಈ ಮಹನೀಯರ ಚಿಂತನೆಗಳನ್ನು ಮೈಗೂಡಿಸಿಕೊಂಡು ಬಾಳಬೇಕು ಎಂದು ತಿಳಿಸಿದರು.                                        ಮುಖ್ಯ ಅತಿಥಿಗಳಾಗಿ ಖ್ಯಾತ ಕವಿ ಡಾ. ಕುಮಾರಚಲ್ಯ ಅವರು  ಭಾಗವಹಿಸಿದ್ದರು.                       ಅಂಬೇಡ್ಕರ್ ಅಧ್ಯಯನ ಕೇಂದ್ರ ನಿರ್ದೇಶಕರಾದ ಪ್ರೊ ನೆಲ್ಲಿಕಟ್ಟೆ ಎಸ್ ಸಿದ್ದೇಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷತೆಯನ್ನು ಪ್ರಾಂಶುಪಾಲ ಪ್ರೊ. ಮುತ್ತಯ್ಯ ವಹಿಸಿದ್ದರು.

Leave a Reply

Your email address will not be published. Required fields are marked *