Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ವಿಧಾನ ಪರಿಷತ್ ಸದಸ್ಯ , ಹಿರಿಯ ಪತ್ರಕರ್ತ ಕೆ.ಶಿವಕುಮಾರ್ ಗೆ ಸನ್ಮಾನ - Karnataka Kahale

ವಿಧಾನ ಪರಿಷತ್ ಸದಸ್ಯ , ಹಿರಿಯ ಪತ್ರಕರ್ತ ಕೆ.ಶಿವಕುಮಾರ್ ಗೆ ಸನ್ಮಾನ

ಬೆಂಗಳೂರು, ಮಾ.15: ಹಿರಿಯ ಪತ್ರಕರ್ತರು, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಹಿರಿಯ ಸದಸ್ಯರಾದ ಕೆ. ಶಿವಕುಮಾರ್ ಅವರು ವಿಧಾನಪರಿಷತ್ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಹಿನ್ನೆಲೆಯಲ್ಲಿ  ಶುಕ್ರವಾರ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು.

ವಿಧಾನ ಪರಿಷತ್ ಸದಸ್ಯರಾಗಿ ನೇಮಕಾವಾದ ಬಳಿಕ ಇದೇ ಮೊದಲ ಬಾರಿ ಪತ್ರಕರ್ತರ ಸಹಕಾರ ಸಂಘಕ್ಕೆ ಆಗಮಿಸಿದ ಶಿವಕುಮಾರ್ ಅವರು ಸಂಘದ ಕಾರ್ಯವೈಖರಿಯ ಸಮಗ್ರ ಮಾಹಿತಿ ಪಡೆದರು. ಸಂಘದ ಅಧ್ಯಕ್ಷರಾದ ರಮೇಶ್ ಪಾಳ್ಯ ಅವರು ಸಂಘದ ವಹಿವಾಟು, ಲಾಭ, ಸಾಲ ವಸೂಲಸತಿ ಸೇರಿದಂತೆ ಸಮಗ್ರ ಮಾಹಿತಿ ನೀಡಿದರು. ಈ ಬಗ್ಗೆ ಶ್ಲಾಘಿಸಿದ ಶಿವಕುಮಾರ್ ಅವರು ಸಂಘದ ಅಭಿವೃದ್ಧಿಗೆ ಸಲಹೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಖಜಾಂಚಿ ಮೋಹನ್ ಕುಮಾರ್, ನಿರ್ದೇಶಕರಾದ ಪರಮೇಶ್, ವಿನೋದ ಕುಮಾರ್ ಬಿ ನಾಯ್ಕ್, ರಮೇಶ್ ಹಿರೇಜಂಬೂರು, ಪರಮೇಶ್, ಕೃಷ್ಣ ಕುಮಾರ್, ರಾಜೇಂದ್ರ ಕುಮಾರ್, ಧ್ಯಾನ್ ಪೂಣಚ್ಚ, ಸೋಮಣ್ಣ, ನಯನಾ, ಸಂಘದ ಖಜಾಂಚಿ ರಘು, ಮತ್ತು ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.