Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ರಾಷ್ಟ್ರೀಯ ಯುವ ಸಂಸತ್‌ ಉತ್ಸವಕ್ಕೆ ಚಾಲನೆ: ಸದೃಢ ರಾಷ್ಟ್ರ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಪಣತೊಡಲು ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ ಮೋಕ ಸಲಹೆ - Karnataka Kahale

ರಾಷ್ಟ್ರೀಯ ಯುವ ಸಂಸತ್‌ ಉತ್ಸವಕ್ಕೆ ಚಾಲನೆ: ಸದೃಢ ರಾಷ್ಟ್ರ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಪಣತೊಡಲು ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ ಮೋಕ ಸಲಹೆ

ಬಳ್ಳಾರಿ: ಪ್ರತಿಯೊಬ್ಬ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಸದೃಢ ರಾಷ್ಟ್ರ ನಿರ್ಮಾಣಕ್ಕೆ ಪಣ ತೊಡಬೇಕು ಎಂದು ತೆಕ್ಕಲಕೋಟೆ ಶ್ರೀಮತಿ ಹೊನ್ನುರಮ್ಮ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ ಮೋಕ ಅವರು  ಹೇಳಿದರು.
ಕೇಂದ್ರ ಸರಕಾರದ ಯುವಜನ ಮತ್ತು ಕ್ರಿಡಾ ಇಲಾಖೆಯಡಿ ತೆಕ್ಕಲಕೋಟೆಯ ಶ್ರೀಮತಿ ಹೊನ್ನುರಮ್ಮ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನೇತೃತ್ವದಲ್ಲಿ ಬಳ್ಳಾರಿಯ ಶ್ರೀಮೇಧಾ ಪದವಿ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರಾಷ್ಟ್ರೀಯ ಸಂಸತ್‌ ಚರ್ಚಾ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಬ್ಬರಲ್ಲೂ ದೇಶಾಭಿಮಾನ ಇರಬೇಕು. ಅದರಲ್ಲೂ ಯುವ ಜನಾಂಗ ದೇಶಾಭಿಮಾನ ಬೆಳೆಸಿಕೊಳ್ಳಬೇಕು. ಸುಂದರ ಹಾಗೂ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಬೇಕು ಎಂದು ತಿಳಿಸಿದರು. ವಿದ್ಯಾರ್ಥಿ ಜೀವನದಲ್ಲಿ ಸ್ಪರ್ಧಾ ಮನೋಭಾವ ಅಗತ್ಯ. ಹೀಗಾಗಿ ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಬೇಕು. ಭಾಷಣ, ಚಿತ್ರಕಲೆ, ಕತೆ, ಕವಿತೆ, ಪ್ರಬಂಧ, ರಸಪ್ರಶ್ನೆ ಸ್ಪರ್ಧೆಗಳಲ್ಲಿಭಾಗವಹಿಸುವ ಮೂಲಕ ಜ್ಞಾನ ಹೆಚ್ಚಿಸಬೇಕು ಎಂದು ಹೇಳಿದರು.
ಎನ್‌ಎಸ್‌ಎಸ್‌ ಅಧಿಕಾರಿ ಬಸವರಾಜ ಎ.ಎಸ್‌ ಮಾತನಾಡಿ, ವಿಕಾಸಿತ ಭಾರತ ವಿಚಾರ ಮಂಡನೆ ಚರ್ಚಾ ಸ್ಪರ್ಧೆಯಲ್ಲಿ ಭಾಗವಹಿಸಿದವರು ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಲು ಅವಕಾಶ ವಿರುತ್ತದೆ. ಮೊದಲ ಹಂತದ ಈ ಚರ್ಚಾ ಸ್ಪರ್ಧೆ ಜಿಲ್ಲಾ ಮಟ್ಟದ್ದಾಗಿದ್ದು, ಇಲ್ಲಿಆಯ್ಕೆಯಾದ ವಿದ್ಯಾರ್ಥಿಗಳನ್ನು
ರಾಜ್ಯ ಮಟ್ಟಕ್ಕೆ ಕಳುಹಿಸಲಾಗುತ್ತದೆ ಎಂದು ವಿವರಿಸಿದರು.
ರಾಜ್ಯಮಟ್ಟಕ್ಕೆ ಆಯ್ಕೆ: ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವ ವಿದ್ಯಾಲಯ ವ್ಯಾಪ್ತಿಯ ನಾನಾ ಕಾಲೇಜುಗಳಿಂದ 100 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಅದರಲ್ಲಿ ಐವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಸಹನಾ ಮಲ್ಲಿಕಾರ್ಜುನ ಮೋಕ, ಇಂಗ್ಲಿಷ್‌ ವಿಭಾಗದ ಮುಖ್ಯಸ್ಥೆ ಸುನಿತಾ ನಿರ್ಣಾಯಕರಾಗಿ ಭಾಗವಹಿಸಿದ್ದರು. ಶ್ರೀ ಮೇಧಾ ಕಾಲೇಜಿನ ಪ್ರಾಂಶುಪಾಲ ಡಾ.ರಾಮಕಿರಣ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎನ್‌ಎಸ್‌ಎಸ್‌ಕಾರ್ಯಕ್ರಮ ಅಧಿಕಾರಿ ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು.
—–