Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಬೀದರ್‌ನಲ್ಲಿ ರಾಜ್ಯ ಪತ್ರಕರ್ತರ ಸಮ್ಮೇಳನ, ಸಮಿತಿಗಳ ಪೂರ್ವ ಸಿದ್ದತಾ ಸಭೆ ಅರ್ಥಪೂರ್ಣ ಸಮ್ಮೇಳನಕ್ಕೆ ಸರ್ವರು ಕೈ ಜೋಡಿಸಲು ತಗಡೂರು ಕರೆ - Karnataka Kahale

ಬೀದರ್‌ನಲ್ಲಿ ರಾಜ್ಯ ಪತ್ರಕರ್ತರ ಸಮ್ಮೇಳನ, ಸಮಿತಿಗಳ ಪೂರ್ವ ಸಿದ್ದತಾ ಸಭೆ ಅರ್ಥಪೂರ್ಣ ಸಮ್ಮೇಳನಕ್ಕೆ ಸರ್ವರು ಕೈ ಜೋಡಿಸಲು ತಗಡೂರು ಕರೆ

ಬೀದರ್: ಬಸವಣ್ಣ ನಡೆದಾಡಿದ ನೆಲದಲ್ಲಿ ನಡೆಯುತ್ತಿರುವ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಅರ್ಥಪೂರ್ಣವಾಗಿದೆ ಆಚರಣೆ ಮಾಡುವ ಮೂಲಕ ಇತಿಹಾಸ ಪುಟದಲ್ಲಿ ದಾಖಲೆಯಾಗುವ ಸಮ್ಮೇಳನವನ್ನು ಮಾಡಲು ಸಂಘಟಿತ ಪ್ರಯತ್ನ ನಡೆಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕರೆ ನೀಡಿದರು.
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನದ ವಿವಿಧ ಸಮಿತಿಗಳ ಪೂರ್ವ ತಯಾರಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬೀದರ್ ಪತ್ರಕರ್ತರ ಕೋರಿಕೆ ಮೇರೆಗೆ ಇಲ್ಲಿಗೆ ಸಮ್ಮೇಳನ ನೀಡಲಾಗಿದೆ. ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರು, ವಿಧಾನ ಸಭೆ, ವಿಧಾನ ಪರಿಷತ್ ಸಭಾಪತಿಗಳನ್ನು ಹಾಗೂ ಹಿರಿಯ ಪತ್ರಕರ್ತರು ಸೇರಿದಂತೆ ರಾಜ್ಯ ಮಟ್ಟದ ಎಲ್ಲ ಪತ್ರಿಕೆಗಳ ಸಂಪಾದಕರನ್ನು ಸಮ್ಮೇಳನಕ್ಕೆ ಅಹ್ವಾನಿಸಲಾಗಿದೆ ಎಂದರು.
ಎರಡು ದಿನದ ಸಮ್ಮೇಳನದಲ್ಲಿ ಉದ್ಘಾಟನೆ ಮತ್ತು ಸಮಾರೋಪ ಹೊರತುಪಡಿಸಿ, ಇನ್ನುಳಿದಂತೆ ಗೋಷ್ಠಿಗಳು, ಚಿಂತನ-ಮಂಥನ, ಸಂವಾದ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ ನಡೆಯಲಿದೆ. ನಾಡಿನಾದ್ಯಂತೆ ಈಗಾಗಲೇ ಎರಡೂವರೆ ಸಾವಿರ ಪತ್ರಕರ್ತರು ಸಮ್ಮೇಳನಕ್ಕೆ ಬರಲು ನೋಂದಣಿ ಮಾಡಿಕೊಂಡಿದ್ದಾರೆ. ನಾಡಿನ ಪತ್ರಕರ್ತರು ಇಲ್ಲಿ ಬಂದು ಹೋಗುವ ತನಕ ಆತಿಥ್ಯ ನೀಡುವುದು ಸ್ವಾಗತ ಸಮಿತಿ ಜವಬ್ದಾರಿಯಾಗಿರುವ ಕಾರಣ ಎಲ್ಲರೂ ಒಟ್ಟಾಗಿ ಸಮ್ಮೇಳನ ಯಶಸ್ವಿಗೆ ದುಡಿಯಬೇಕು ಎಂದರು.
ಹೊಸ ಜಾಹಿರಾತು ನೀತಿಯಿಂದ ಪತ್ರಿಕೆಗಳ ಸಂಪಾದಕರಿಗೆ ಆಗುತ್ತಿರುವ ತೊಂದರೆ ಬಗೆಹರಿಸಲು ಮುಖ್ಯಮಂತ್ರಿಗಳಿಗೆ ಈಗಾಗಲೆ ಮನವಿ ಸಲ್ಲಿಸಲಾಗಿದ್ದು, ಸಮ್ಮೇಳನ ಸಂದರ್ಭದಲ್ಲೂ ಸಿಎಂಗೆ ಈ ಕುರಿತು ಮನವಿ ಮಾಡುವುದಾಗಿ ಭರವಸೆ ನೀಡಿದರು.
ಸ್ಮರಣ ಸಂಚಿಕೆ ಹಾಗೂ ಕೈಪಿಡಿಗಳನ್ನು ಪ್ರತ್ಯೇಕವಾಗಿ ಹೊರ ತರಲು ನಿರ್ಣಯಿಸಲಾಯಿತು. ವಸತಿ ಸಮಿತಿ, ಸಾರಿಗೆ ಸಮಿತಿಗಳು ಸೇರಿದಂತೆ ಎಲ್ಲ ಸಮಿತಿಗಳ ನಡುವೆಯೂ ಸೌಹಾರ್ದತೆಯ ಹೊಂದಾಣಿಕೆಯಿಂದ ಕೆಲಸ ಮಾಡಬೇಕು ಎಂದರು. ಛಾಯಾಚಿತ್ರ ಪ್ರದರ್ಶನ ಮತ್ತು ವ್ಯಂಗ್ಯಚಿತ್ರ ಪ್ರದರ್ಶನಗಳು ಅಚ್ಚುಕಟ್ಟಾಗಿ ನಡೆಯಬೇಕು. ಅದಕ್ಕಾಗಿ ಸಿದ್ಧತೆಗಳು ನಡೆಯಬೇಕು ಎಂದರು. ಹಿರಿಯರು ಹಾಗೂ ಮಾಜಿ ಜಿಲ್ಲಾಧ್ಯಕ್ಷರ ಸಲಹಾ ಸಮಿತಿ, ಪ್ರವಾಸ, ಆಹಾರ, ಮೆರವಣಿಗೆ, ವಸ್ತು ಪ್ರದರ್ಶನ ಮಾರಾಟ ಮಳಿಗೆ, ಪ್ರತಿನಿಧಿಗಳ ನೊಂದಣಿ ಹಾಗೂ ಕಿಟ್ ವಿತರಣಾ ಸಮಿತಿಗಳ ತಯಾರಿ ಕುರಿತು ಪೂರ್ವ ಸಿದ್ದತಾ ಸಭೆ ಜರುಗಿತು.
ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ ಮಾತನಾಡಿ, ಬೀದರ್ ಪತ್ರಕರ್ತರು ತಮಗೆ ಸಿಕ್ಕ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು. ತಗಡೂರು ಅವರಂಥ ರಾಜ್ಯಾಧ್ಯಕ್ಷರು ನಮಗೆ ಸಿಕ್ಕಿದ್ದು ನಮ್ಮೆಲ್ಲರ ಸೌಭಾಗ್ಯ. ಜಿಲ್ಲೆಗೆ ದೊರಕಿರುವ 40ನೇ ರಾಜ್ಯ ಸಮ್ಮೇಳನ ಯಶಸ್ವಿಯಾಗಿಸಲು ವೈಮನಸ್ಸು ಬಿಟ್ಟು ಪ್ರತಿಯೊಬ್ಬರ ಸಹಭಾಗಿತ್ವ ಬಹಳ ಮುಖ್ಯ ಎಂದರು.
ನಮ್ಮ ಮನವಿಗೆ ಸ್ಪಂದಿಸಿ ಬೀದರ್‌ಗೆ ಸಮ್ಮೇಳನ ನೀಡಿದಕ್ಕೆ ಧನ್ಯವಾದ ತಿಳಿಸಿದ, ಸಂಘದ ಮಾಜಿ ಜಿಲ್ಲಾಧ್ಯಕ್ಷ ಬಾಬುವಾಲಿ ಮಾತನಾಡಿ, ಜಿಲ್ಲಾ ಪದಾಧಿಕಾರಿಗಳನ್ನು ನೇಮಕ ಮಾಡಿ ಹಾಗೂ ಹೊಸ ಜಾಹಿರಾತು ನೀತಿ ಬಗೆಹರಿಸಲು ರಾಜ್ಯ ಸಂಘ ಮುಂದಾಗಬೇಕೆಂದರು.
ಸಂಘದ ಜಿಲ್ಲಾಧ್ಯಕ್ಷ ಆನಂದ ದೇವಪ್ಪ ಅವರು ವಸತಿ, ಸಾರಿಗೆ, ಆರ್ಥಿಕತೆ ಸೇರಿದಂತೆ ವಿವಿಧ ಸಮಿತಿಗಳ ಹಾಗೂ ಕಾರ್ಯಕ್ರಮದ ತಯಾರಿ ಬಗ್ಗೆ ಸಭೆಗೆ ವಿವರಿಸಿ, ಸಮ್ಮೇಳನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ನಮ್ಮ ತಂಡ ಹಗಲು ರಾತ್ರಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಸಮ್ಮೇಳನದ ಯಶಸ್ವಿಯಾಗಿಸಲು ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ಮಾಜಿ ಅಧ್ಯಕ್ಷರುಗಳಾದ ಅಶೋಕ್ ಕಾರಂಜಿ, ಬಸವರಾಜ ಕಾಮಶೆಟ್ಟಿ, ಮಾಳಪ್ಪ ಅಡಸಾರೆ ತಿಳಿಸಿದರು.
ಸಂಘದ ಮಾಜಿ ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್ ಠಾಕೂರ್, ಮಾಜಿ ಜಿಲ್ಲಾಧ್ಯಕ್ಷರಾದ ಸಿದ್ರಾಮಯ್ಯ ಸ್ವಾಮಿ, ಅಶೋಕಕುಮಾರ ಕರಂಜಿ, ಡಿ.ಕೆ ಗಣಪತಿ, ಪತ್ರಕರ್ತರಾದ ಅಪ್ಪಾರಾವ ಸೌದಿ, ಶಶಿ ಪಾಟೀಲ, ಪ್ರಥ್ವಿರಾಜ, ಶಶಿ ಶೆಂಬೆಳ್ಳಿ, ಶಶಿ ಬಂಬುಳಗಿ, ವಿಜಯಕುಮಾರ ಬೆಳ್ದೆ, ದೀಪಕ ಮನ್ನಳ್ಳಿ, ಗೋಪಿಚಂದ್ ತಾಂದಳೆ, ಮಾರೂತಿ ಬಾವಿದೊಡ್ಡಿ, ಶ್ರೀಕಾಂತ ಬಿರಾದಾರ, ನಂದಕುಮಾರ ಕರಂಜೆ, ವಿಜಯಕುಮಾರ ಅಷ್ಟುರೆ, ಅಜಯ ಭೋಸ್ಲೆ, ಬಸವರಾಜ ಪವಾರ ಸೇರಿದಂತೆ ವಿವಿಧ ಸಮಿತಿಗಳ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು. ಶಿವಕುಮಾರ ಸ್ವಾಮಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.