Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-content/plugins/post-views-counter/includes/class-counter.php on line 1734
ಸ್ಪರ್ಧಾತ್ಮಕ ಜಗತ್ತಿನಲ್ಲಿ ಅಗತ್ಯ ಭಾಷಾ ಪ್ರಾವೀಣ್ಯತೆ ಮುಖ್ಯ: ಪ್ರೊ.ಶಿವರಾಜ್ ಕಿವಿಮಾತು - Karnataka Kahale

ಸ್ಪರ್ಧಾತ್ಮಕ ಜಗತ್ತಿನಲ್ಲಿ ಅಗತ್ಯ ಭಾಷಾ ಪ್ರಾವೀಣ್ಯತೆ ಮುಖ್ಯ: ಪ್ರೊ.ಶಿವರಾಜ್ ಕಿವಿಮಾತು

ಹರಿಹರ, ಏ.2: ವಿಷಯದ ಜ್ಞಾನವನ್ನು ಸ್ವಿಕರಿಸಲು ಹಾಗೂ ವಿತರಿಸಲು ಜಾಗತಿಕ ಭಾಷಾ ಜ್ಞಾನ ಅವಶ್ಯ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಭಾಷಾ ಪ್ರಾವೀಣ್ಯತೆಯು ಒಂದು ನಿರ್ಣಾಯಕ ಆಸ್ತಿಯಾಗಿದೆ. ವೃತ್ತಿ ಪ್ರಗತಿ, ಜಾಗತಿಕ ವ್ಯವಹಾರ ವಿಸ್ತರಣೆ ಮತ್ತು ಪರಿಣಾಮಕಾರಿ ಸಂವಹನಕ್ಕೆ ಪ್ರಮುಖ ಸಾಧನವಾಗಿ ಭಾಷೆ ಕಾರ್ಯನಿರ್ವಹಿಸುತ್ತದೆ ಎಂದು ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಪ್ರೊ.ಶಿವರಾಜ್.ಎನ್ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐ.ಕ್ಯೂ.ಎ.ಸಿ ಹಾಗೂ ಗಣಿತಶಾಸ್ತ್ರ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ರೇಖೀಯ ರೂಪಾಂತರ’ (Linear Transformation) ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾಷೆಗಳ ಪಾಂಡಿತ್ಯ, ವಿಶೇಷವಾಗಿ ಇಂಗ್ಲಿಷ್ ಅಂತರರಾಷ್ಟ್ರೀಯವಾದ ಸ್ಪರ್ಧಾತ್ಮಕ ಜಗತ್ತಿಗೆ ಸಹಾಯಕವಾಗಿದೆ. ಗಡಿಯಾಚೆಗಿನ ಸಹಯೋಗವನ್ನು ಸುಗಮಗೊಳಿಸುತ್ತದೆ ಮತ್ತು ವೈವಿಧ್ಯಮಯ ಭಾಗವಹಿಸುವಿಕೆಯಲ್ಲಿ ವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ಅಭಿಪ್ರಾಯಪಟ್ಟರು.
ಗಣಿತಶಾಸ್ತ್ರ ಅಧ್ಯಯನದಿಂದ ಮಾನವನ ಏಕಾಗ್ರತೆ, ಆತ್ಮವಿಶ್ವಾಸ, ಧೈರ್ಯ ಮತ್ತು ಸಾಮರ್ಥ್ಯವನ್ನು ಬೆಳೆಸುತ್ತದೆ. ವಿಶೇಷ ಉಪನ್ಯಾಸಗಳು ವಿದ್ಯಾರ್ಥಿಗಳ ವಿಷಯದ ಜ್ಞಾನವನ್ನು ವಿಸ್ತರಿಸಲು ಸಹಕಾರಿ. ಜ್ಞಾನವನ್ನು ಪಡೆಯಲು ಭಾಷೆ ಅತ್ಯಗತ್ಯ. ಅರಿವಿನ ಬೆಳವಣಿಗೆ, ಸಂವಹನ ಮತ್ತು ಮಾಹಿತಿ ಸಂಸ್ಕರಣೆಗೆ ಪ್ರಾಥಮಿಕ ಸಾಧನವಾಗಿ ಕಾರ್ಯನಿರ್ವಹಿಸುತ್ತದೆ. ಇದು ಸ್ಮರಣಶಕ್ತಿ, ವಿಮರ್ಶಾತ್ಮಕ ಚಿಂತನೆ ಮತ್ತು ಸಮಸ್ಯೆ-ಪರಿಹರಿಸುವ ಕೌಶಲ್ಯಗಳನ್ನು ಹೆಚ್ಚಿಸುತ್ತದೆ ಎಂದು ವಿದ್ಯಾಥಿಗಳಿಗೆ ತಿಳಿಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ.ರಮೇಶ್.ಎಂ.ಎನ್ ಅವರು ಮಾತನಾಡಿ, ದೈನಂದಿನ ಜೀವನದಲ್ಲಿ ಹಣಕಾಸು ನಿರ್ವಹಣೆ, ಪದಾರ್ಥಗಳನ್ನು ಅಳೆಯುವುದು, ಪ್ರಯಾಣದ ಸಮಯವನ್ನು ಲೆಕ್ಕಹಾಕುವುದು ಮತ್ತು ತರ್ಕದ ಮೂಲಕ ನಿರ್ಧಾರ ತೆಗೆದುಕೊಳ್ಳುವಿಕೆಯನ್ನು ಹೆಚ್ಚಿಸುವಲ್ಲಿ ಗಣಿತವು ಅತ್ಯಗತ್ಯ. ಇದರೊಂದಿಗೆ ವಿಮರ್ಶಾತ್ಮಕ ಚಿಂತನೆ ಮತ್ತು ಸಮಯ ನಿರ್ವಹಣೆಯನ್ನು ಬೆಳೆಸಲಾಗುತ್ತದೆ. ವೇಳಾಪಟ್ಟಿಯಿಂದ ತಂತ್ರಜ್ಞಾನದವರೆಗೆ, ಗಣಿತವು ವ್ಯಕ್ತಿತ್ವ ರಚನೆ ಮತ್ತು ದಕ್ಷತೆಯನ್ನು ಒದಗಿಸುತ್ತದೆ ಎಂದು ಹೇಳಿದರು.
ಐ.ಕ್ಯೂ.ಎಸ್.ಸಿ ಸಂಯೋಜಕರಾದ ಡಾ.ಅನಂತನಾಗ್.ಹೆಚ್.ಪಿ ಅವರು ಮಾತನಾಡಿದರು.
ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ.ತಿರುಮಲ.ಎಸ್, ಭೌತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಶರಣ ಬಸವರಾಜ್ ಪಾಟೀಲ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಕು.ಕುಸುಮಾ ಪ್ರಾರ್ಥಿಸಿದರು. ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಯೋಗೀಶ್.ಕೆ.ಎಂ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸಹಪ್ರಾಧ್ಯಾಪಕರಾದ ಡಾ.ಸವಿತಾ.ಬಿ.ಮೇಗಲಮನಿ ಅತಿಥಿಗಳನ್ನು ಪರಿಚಯಿಸಿದರು. ಕು.ಸ್ನೇಹಾ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿ ಹರೀಶ್ ಹೆಚ್.ಟಿ ವಂದಿಸಿದರು.
—–