
ಹರಿಹರ: ಯುವ ಸಮೂಹ ಮೊಬೈಲ್ ಗೀಳು ಬಿಟ್ಟು ಪರಿಶ್ರಮದಿಂದ ಅಧ್ಯಯನ ಮಾಡಬೇಕು. ದುಶ್ಚಟಗಳಿಂದ ದೂರವಿದ್ದು, ಮಾದರಿ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಗ್ರಾಮಾಂತರ ಪೋಲಿಸ್ ಉಪನಿರೀಕ್ಷಕರಾದ ಶ್ರೀಮತಿ ಮಂಜುಳ.ಡಿ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕ-೧ ಮತ್ತು ೨ ರ ವತಿಯಿಂದ ತಾಲೂಕಿನ ಸಾಲಕಟ್ಟೆ ಆಯೋಜಿಸಿರುವ ವಾರ್ಷಿಕ ಶಿಬಿರದ ಮೂರನೆಯ ದಿನದ ಸಂಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿಗೆ ನಡೆಯುತ್ತಿರುವ ಸೈಬರ್ ಕ್ರೈಂಗಳ ಬಗ್ಗೆ ಯುವಜನತೆಯನ್ನು ಎಚ್ಚರಿಸಿದರು. ವಿದ್ಯಾರ್ಥಿಗಳು ಪರಿಶ್ರಮದಿಂದ ತಮ್ಮ ಗುರಿಗಳನ್ನು ಸಾಧಿಸಲು ಸಾಧ್ಯ. ಪೋಷಕರು ಮಕ್ಕಳ ನಡವಳಿಕೆ ಮೇಲೆ ನಿಗಾ ವಹಿಸುವ ಅವಶ್ಯಕತೆ ಇದೆ ಎಂದು ಹೇಳಿದರು.
ಕಾಲೇಜಿನ ಹಳೇ ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷರು ಮತ್ತು ವಕೀಲರು ಆಗಿರುವ ವೀರೇಶ್ ಬ.ಅಜ್ಜಣ್ಣನವರ್ ಮಾತನಾಡಿ, ಯುವ ಜನತೆ ಬಯಸಿದರೆ ಇಡೀ ದೇಶದಲ್ಲಿ ಪರಿವರ್ತನೆ ತರುತ್ತದೆ. ಇವರು ಡ್ರಗ್ಸ್, ಆಲ್ಕೋಹಾಲ್, ಗುಟ್ಕಾ ಮತ್ತು ಇತರೆ ಮಾದಕ ವಸ್ತುಗಳ ದಾಸರಾಗದಂತೆ ತಡೆಯಬೇಕು. ಇಂಥ ಪ್ರಕರಣಗಳಿದ್ದರೆ ಬೇಗ ಗುರುತಿಸಿ ಆಪ್ತ ಸಮಾಲೋಚನೆ ಮೂಲಕ ಬಿಡಿಸಬೇಕು. ತಜ್ಞರ ಸಲಹೆ ಪಡೆಯಬೇಕು. ಮೊಬೈಲ್ ದುರ್ಬಳಕೆ ತಡೆಗೂ ಇದು ಅನ್ವಯವಾಗುತ್ತದೆ ಎಂದರು.
ಗ್ರಾಮದ ಮುಖಂಡರಾದ ಎಸ್.ಬಿ.ವಿಶ್ವನಾಥ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಮದ ಮುಖಂಡರಾದ ಎಸ್.ಬಿ.ರೇವಣಸಿದ್ದಪ್ಪ, ಎಂ.ಜಿ.ಮಹದೇವಪ್ಪ, ಕೆ.ವೈ.ಅಶೋಕ, ಜಿ.ಸಿ.ಮಹೇಶ್ವರಪ್ಪ, ಶಿವನಂದಪ್ಪ ಇಟಿಗಿ, ಟಿ.ಎಂ.ವೀರಯ್ಯ, ಎ.ಎ.ದಂಡ್ಯೆಪಪ್ಪ ಇನ್ನಿತತರು ಹಾಗೂ ಕಾಲೇಜಿನ ವಾಣಿಜ್ಯಶಾಸ್ತçದ ಸಹ ಪ್ರಾಧ್ಯಾಪಕರಾದ ಡಾ.ದಾಕ್ಷಾಯಿಣಿ.ಜಿ.ಎನ್, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಮಮತಾ.ಹೆಚ್.ಸಾಹುಕಾರ, ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಶಮಾ ತುಮ್ಮಿನಕಟ್ಟಿ, ಗಣಕವಿಜ್ಞಾನ ವಿಭಾಗದ ಮುಖ್ಯಸ್ಥರಾದ ವೆಂಕಪ್ಪನವರ ಬಸವರಾಜು, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳಾದ ಯೋಗೇಶ್.ಕೆ.ಜೆ, ಹನುಮಂತಪ್ಪ.ಕೆ.ವೈ, ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸರಾದ ಶ್ರೀಮತಿ ನಾಗವೇಣಿ.ಆರ್.ಎಸ್, ಐಶ್ವರ್ಯ ಜೆ.ಶೆಟ್ಟರ್ ಅವರುಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ಶಿಬಿರಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
