ರಾವಿಹಾಳದಲ್ಲಿ ಅಸಂಘಟಿತ ಕಾರ್ಮಿಕರಿಗೆ ಇ-ಶ್ರಮ್ ತಂತ್ರಾಂಶ ಕಾರ್ಡ್ ಗಳ ವಿತರಣೆ

ಸಿರಗುಪ್ಪ, ಆ.29: ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯ, ರಾಜ್ಯ ಕಾರ್ಮಿಕ ಇಲಾಖೆಯ ಮಹಾತ್ವಕಾಂಕ್ಷಿ ಯೋಜನೆಯಾದ “ಇ-ಶ್ರಮ್ ತಂತ್ರಾಂಶ” ಅಸಂಘಟಿತ ವಲಯದ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ನೋಂದಣಿ ಇ-ಶ್ರಮ್ ಕಾರ್ಡ್ ವಿತರಣೆ ಕಾರ್ಯಕ್ರಮವು ಸಿರಗುಪ್ಪ ತಾಲೂಕಿನ ರಾವಿಹಾಳ ಗ್ರಾಮದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿತ್ತು.
ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾರ್ಮಿಕ ಒಕ್ಕೂಟದ ವತಿಯಿಂದ ಏರ್ಪಡಿಸಿದ್ದ ಈ ಕಾರ್ಯಕ್ರಮದಲ್ಲಿ“ಇ-ಶ್ರಮ್ ತಂತ್ರಾಂಶ” ಯಲ್ಲಿ ನೋಂದಣಿಯಾದ ಗ್ರಾಮದ ಅಸಂಘಟಿತ ಕಾರ್ಮಿಕರಿಗೆ ಕಾರ್ಡುಗಳನ್ನು ವಿತರಿಸಲಾಯಿತು.
ಗ್ರಾಮದ ಸಮಾಕಸೇವಕ ಆರ್.ಎನ್. ಶಿವರಾಜ್ ಮಾತನಾಡಿ ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆಯೊಂದಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ದೊರಕುವಂತಾಗಬೇಕು, ಆರ್ಥಿಕತೆಯ ಪಿರಮಿಡ್ಡಿನ ತಳಹದಿಯಾಗಿರುವ ಅಸಂಘಟಿತ ಕಾರ್ಮಿಕರೇ ದೇಶದ ಶಕ್ತಿ, ಆದ್ದರಿಂದ ದೇಶದಲ್ಲಿ ಅಸಂಘಟಿತ ವಲಯದ 38 ಕೋಟಿ ಕಾರ್ಮಿಕರಿದ್ದು, ಕಟ್ಟಡ ಕಾರ್ಮಿಕರು ವಲಸೆ ಕಾರ್ಮಿಕರು ಬೀದಿ ಬದಿ ವ್ಯಾಪಾರಿಗಳು ಗೃಹಕಾರ್ಮಿಕರ ಮುಂತಾದ ಅಸಂಘಟಿತ ವಲಯದಲ್ಲಿ ದುಡಿಯುವ ವರ್ಗಗಳನ್ನು ಒಂದೇ ವೇದಿಕೆಯಡಿ ತರುತ್ತಿರುವುದು ಮಹತ್ವದ ಕಾರ್ಯ ಎಂದರು.
ಅಸಂಘಟಿತ ಕಾರ್ಮಿಕರಿಗೆ ಯೋಜನೆಗಳ ಲಾಭ ದೊರಕಿಸಿಕೊಡುವುದು ಕೂಡ ಈ ಯೋಜನೆ ಉದ್ದೇಶವಾಗಿದೆ. ಇ- ಶ್ರಮ ಯೋಜನೆ ಅಡಿಯಲ್ಲಿ ನೊಂದಣಿ ಪಡೆಯುವ ಪ್ರತಿ ಅಸಂಘಟಿತ ಕಾರ್ಮಿಕರಿಗೆ 2 ಲಕ್ಷ ರೂ ಅಪಘಾತ ವಿಮೆ ಯೋಜನೆ ಕೇಂದ್ರ ಸರ್ಕಾರ ಜಾರಿಗೆ ತಂದಿರುತ್ತದೆ. ಗ್ರಾಮದ ಅಸಂಘಟಿತ ಕಾರ್ಮಿಕರು ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಘಟಕದ ಅಧ್ಯಕ್ಷ ಕೇಶಪ್ಪ ನಾಯಕ್, ಜಯರಾಮ್, ರಾಕೇಶ್, ವೀರೇಶ್ ಹಾಗೂ ಗ್ರಾಮದ ಅಸಂಘಟಿತ ಕಾರ್ಮಿಕರು, ಗ್ರಾಮಸ್ಥರು ಹಾಜರಿದ್ದರು.
*****

Leave a Reply

Your email address will not be published. Required fields are marked *