Warning: session_start(): Cannot start session when headers already sent in /home/karnatak/public_html/wp-content/plugins/the-visitor-counter/classes/class.widget.php on line 10

Warning: Cannot modify header information - headers already sent by (output started at /home/karnatak/public_html/wp-content/plugins/free-comments-for-wordpress-vuukle/free-comments-for-wordpress-vuukle.php:1) in /home/karnatak/public_html/wp-includes/feed-rss2.php on line 8
ಕರ್ನಾಟಕ ಕಹಳೆ ಸುದ್ದಿ ಜಾಲ – Karnataka Kahale https://www.karnatakakahale.com ಕನ್ನಡಿಗರ ಕೊರಳ ಧ್ವನಿ Mon, 18 May 2026 01:09:07 +0000 en-US hourly 1 https://wordpress.org/?v=6.3.8 https://www.karnatakakahale.com/wp-content/uploads/2020/11/cropped-Karnataka-Kahale-1-1-32x32.jpg ಕರ್ನಾಟಕ ಕಹಳೆ ಸುದ್ದಿ ಜಾಲ – Karnataka Kahale https://www.karnatakakahale.com 32 32 ಮೇ 31ರಂದು ಚಿಕ್ಕಬಳ್ಳಾಪುರದಲ್ಲಿ ರಾಜ್ಯ ಮಟ್ಟದ ಕೆಯುಡಬ್ಲೂಜೆ ಪ್ರತಿಭಾ ಪುರಸ್ಕಾರ: ಶಿವಾನಂದ ತಗಡೂರು https://www.karnatakakahale.com/news/22868 Mon, 18 May 2026 01:09:07 +0000 https://www.karnatakakahale.com/?p=22868 ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ)ದ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಮೇ 31 ರಂದು ಭಾನುವಾರ ಚಿಕ್ಕಬಳ್ಳಾಪುರ ಕನ್ನಡ ಭವನದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಚಿಕ್ಕಬಳ್ಳಾಪುರ ಪತ್ರಿಕಾ ಭವನದಲ್ಲಿ ಸಂಘದ…

The post ಮೇ 31ರಂದು ಚಿಕ್ಕಬಳ್ಳಾಪುರದಲ್ಲಿ ರಾಜ್ಯ ಮಟ್ಟದ ಕೆಯುಡಬ್ಲೂಜೆ ಪ್ರತಿಭಾ ಪುರಸ್ಕಾರ: ಶಿವಾನಂದ ತಗಡೂರು appeared first on Karnataka Kahale.

]]>

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ)ದ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಮೇ 31 ರಂದು ಭಾನುವಾರ ಚಿಕ್ಕಬಳ್ಳಾಪುರ ಕನ್ನಡ ಭವನದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಚಿಕ್ಕಬಳ್ಳಾಪುರ ಪತ್ರಿಕಾ ಭವನದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ ಜಿಲ್ಲಾ ಸಂಘದ ಪದಾಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ನಿರ್ಣಯಿಸಲಾಗಿದೆ.
ಸಭೆಯಲ್ಲಿ ಮಾತನಾಡಿದ ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಮೋಕ್ಷಗುಂಡಂ ಸರ್.ಎಂ.ವಿಶೇಶ್ವರಯ್ಯ ಜನ್ಮ ಸ್ಥಳ, ನಂದಿ ಬೆಟ್ಟದ ಸೊಬಗು, ದ್ರಾಕ್ಷಿಯ ನಾಡಿನಲ್ಲಿ ಮೊಟ್ಟ ಮೊದಲ ಬಾರಿಗೆ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಆಯೋಜಿಸುತ್ತಿರುವುದು ಸಂತೋಷದ ಸಂಗತಿ ಎಂದು ಹೇಳಿದರು.
ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಿಗೆ ರಾಜ್ಯ ಸಂಘದಿಂದ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿದ್ದು ಇದು ರಾಜ್ಯ ಮಟ್ಟದ 6ನೇ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇದಾಗಿದೆ ಎಂದರು.
ಬೀದರ್‌ನಿಂದ ಚಾಮರಾಜಪೇಟೆಯವರೆಗೂ ಕೊಡುಗು-ಕೋಲಾರದಿಂದ ಹಿಡಿದು ರಾಜ್ಯದ 31 ಜಿಲ್ಲೆಗಳ ಪತ್ರಕರ್ತರ ಮಕ್ಕಳು ಹಾಗೂ ಪೋಷಕರು ಸೇರಿ ಸುಮಾರು 400 ರಿಂದ 500 ಕ್ಕೂ ಹೆಚ್ಚು ಮಂದಿ ಈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಪ್ರತಿಭಾ ಪುರಸ್ಕಾರ ಸ್ವೀಕರಿಸಲು ಬರುವ ದೂರದ ಜಿಲ್ಲೆಗಳ ವಿದ್ಯಾರ್ಥಿ ಪೋಷಕರಿಗೆ ಸೂಕ್ತ ವಸತಿ, ಊಟ, ತಿಂಡಿ ಸೌಕರ್ಯ ಮಾಡಲು ಜಿಲ್ಲಾ ಸಂಘಕ್ಕೆ ಸೂಚಿಸಿದ ಅವರು, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮಿನಿ ರಾಜ್ಯ ಪತ್ರಕರ್ತರ ಸಮ್ಮೇಳನದ ಮಾದರಿಯಲ್ಲಿ ನಡೆಯುವಂತೆ ಸಲಹೆ ನೀಡಿದರು.
ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಗೆ ಆದ್ಯತೆ ನೀಡಬೇಕು, ಜಿಲ್ಲೆಯ ಕಲೆ, ಸಂಸ್ಕೃತಿಯ ಹಿರಿಮೆಯನ್ನು ಪರಿಚಯಿಸುವ ವಸ್ತು ಪ್ರದರ್ಶನ ಆಯೋಜನೆಗೆ ಸಲಹೆ ನೀಡಿ ಒಟ್ಟಾರೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಪತ್ರಕರ್ತರ ನೆನಪಿನಲ್ಲಿ ಉಳಿಯುವ ರೀತಿಯಲ್ಲಿ ಆಯೋಜಿಸಬೇಕು ಎಂದರು.
ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ರಾಜ್ಯ ಸಂಘದಿಂದ ನಗದು, ಪ್ರಶಸ್ತಿ ಪತ್ರ ಬಹುಮಾನದ ಜೊತೆಗೆ ಸ್ಮರಣಿಕೆ ನೀಡಲಾಗುವುದೆಂದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಜಿಲ್ಲಾಧ್ಯಕ್ಷ ವಿ.ರವಿಕುಮಾರ್ ಮಾತನಾಡಿ, ರಾಜ್ಯ ಸಂಘದ ನಿರೀಕ್ಷೆಗೂ ಮೀರಿ ಜಿಲ್ಲಾ ಸಂಘವೂ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಸಂಘಟಿಸಲಿದೆ. ಕಾರ್ಯಕ್ರಮದ ಯಶಸ್ವಿಗೆ ಜಿಲ್ಲಾ ಸಂಘ ತಾಲೂಕು ಸಂಘಗಳ ಪದಾಧಿಕಾರಿಗಳನ್ನು ಕರೆದು ವಿವಿಧ ಜವಾಬ್ದಾರಿಗಳನ್ನು ನೀಡಲು ಉಪ ಸಮಿತಿಗಳನ್ನು ರಚಿಸಲಾಗುವುದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿ ಪೋಷಕರಿಗೆ ಜಿಲ್ಲೆಯ ಪ್ರಮುಖ ಸ್ಥಳಗಳ ಭೇಟಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ರಾಜ್ಯ ಖಜಾಂಚಿ ವಾಸುದೇವಹೊಳ್ಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಗತಿ ನಾಗರಾಜಪ್ಪ, ರಾಜ್ಯ ಸಮಿತಿ ಸದಸ್ಯರಾದ ಎನ್.ಚಂದ್ರಶೇಖರ್ ಮತ್ತಿತರರು ವೇದಿಕೆಯಲ್ಲಿದ್ದರು.
ಸಭೆಯಲ್ಲಿ ಜಿಲ್ಲಾ ಸಂಘದ ಪದಾಧಿಕಾರಿಗಳು, ಕಾರ್ಯಕಾರಣಿ ಮಂಡಳಿ ಸದಸ್ಯರು, ವಿವಿಧ ತಾಲೂಕು ಸಂಘಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಕೇಂದ್ರದ ಹಿರಿಯ ಪತ್ರಕರ್ತರು, ನಿಕಟಪೂರ್ವ ಪದಾಧಿಕಾರಿಗಳು ಉಪಸ್ಥಿತರಿದ್ದು, ಪ್ರತಿಭಾ ಪುರಸ್ಕಾರ ಸಮಾರಂಭದ ಯಶಸ್ವಿನ ಬಗ್ಗೆ ಉಪಯುಕ್ತ ಸಲಹೆಗಳನ್ನು ನೀಡಿದರು.

The post ಮೇ 31ರಂದು ಚಿಕ್ಕಬಳ್ಳಾಪುರದಲ್ಲಿ ರಾಜ್ಯ ಮಟ್ಟದ ಕೆಯುಡಬ್ಲೂಜೆ ಪ್ರತಿಭಾ ಪುರಸ್ಕಾರ: ಶಿವಾನಂದ ತಗಡೂರು appeared first on Karnataka Kahale.

]]>
ಅನುದಿನ ಕವನ-೧೯೨೬, ಹಿರಿಯ ಕವಿ:ಎಂ ಎಸ್ ರುದ್ರೇಶ್ವರಸ್ವಾಮಿ, ಬೆಂಗಳೂರು https://www.karnatakakahale.com/news/22865 Sun, 17 May 2026 17:48:04 +0000 https://www.karnatakakahale.com/?p=22865 1. ಹಗಲೂ ಇರುಳೂ ನಿದ್ರಿಸಿದೆ ಕನಸುಕಂಡೆ, ಕನಸಾಗಿಯೇ ಉಳಿದೆ. 2. ಅಸ್ತವ್ಯಸ್ತ ಬದುಕಿನ ಗದ್ದಲದಲ್ಲೂ ‘ಬದುಕಿದೆ’ ಸಂತೆಯ ಮಹಾಗದ್ದಲದಲ್ಲೂ ಒಂದು ಮೌನವಿದೆ. 3. ದೂರದ ಹಕ್ಕಿಯ ಕರೆಗೆ ಓಗೊಡುವ ಒಂದು ಮೌನದಲ್ಲಿ ಅರಳಿದೆ ಕವಿತೆ. -ಎಂ ಎಸ್ ರುದ್ರೇಶ್ವರಸ್ವಾಮಿ, ಬೆಂಗಳೂರು

The post ಅನುದಿನ ಕವನ-೧೯೨೬, ಹಿರಿಯ ಕವಿ:ಎಂ ಎಸ್ ರುದ್ರೇಶ್ವರಸ್ವಾಮಿ, ಬೆಂಗಳೂರು appeared first on Karnataka Kahale.

]]>
1.
ಹಗಲೂ ಇರುಳೂ
ನಿದ್ರಿಸಿದೆ
ಕನಸುಕಂಡೆ, ಕನಸಾಗಿಯೇ
ಉಳಿದೆ.

2.
ಅಸ್ತವ್ಯಸ್ತ ಬದುಕಿನ ಗದ್ದಲದಲ್ಲೂ
‘ಬದುಕಿದೆ’
ಸಂತೆಯ ಮಹಾಗದ್ದಲದಲ್ಲೂ
ಒಂದು ಮೌನವಿದೆ.

3.
ದೂರದ ಹಕ್ಕಿಯ ಕರೆಗೆ
ಓಗೊಡುವ
ಒಂದು ಮೌನದಲ್ಲಿ ಅರಳಿದೆ
ಕವಿತೆ.


-ಎಂ ಎಸ್ ರುದ್ರೇಶ್ವರಸ್ವಾಮಿ, ಬೆಂಗಳೂರು

The post ಅನುದಿನ ಕವನ-೧೯೨೬, ಹಿರಿಯ ಕವಿ:ಎಂ ಎಸ್ ರುದ್ರೇಶ್ವರಸ್ವಾಮಿ, ಬೆಂಗಳೂರು appeared first on Karnataka Kahale.

]]>
ನಾಳೆ(ಮೇ‌18) ಹರಿಹರ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವಾರ್ಷಿಕೋತ್ಸವ https://www.karnatakakahale.com/news/22860 Sun, 17 May 2026 12:43:06 +0000 https://www.karnatakakahale.com/?p=22860 ಹರಿಹರ, ಮೇ.17: ವಿದ್ಯಾರ್ಥಿಗಳ ಸಾಧನೆ, ಸಾಂಸ್ಕೃತಿಕ ಪ್ರತಿಭೆ ಮತ್ತು ಶೈಕ್ಷಣಿಕ ಪ್ರಗತಿಯನ್ನು ಪ್ರದರ್ಶಿಸುವ ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ೨೦೨೫-೨೬ನೇ ಸಾಲಿನ ವಾರ್ಷಿಕೋತ್ಸವವು ಮೇ 18 ರಂದು ಸೋಮವಾರ ಕಾಲೇಜಿನ ಒಳಾಂಗಣದ ಆವರಣದಲ್ಲಿ ಜರುಗಲಿದೆ. ಬೆ. 10-30 ಗಂಟೆಗೆ ಕಾಲೇಜು ಆಡಳಿತ…

The post ನಾಳೆ(ಮೇ‌18) ಹರಿಹರ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವಾರ್ಷಿಕೋತ್ಸವ appeared first on Karnataka Kahale.

]]>
ಹರಿಹರ, ಮೇ.17: ವಿದ್ಯಾರ್ಥಿಗಳ ಸಾಧನೆ, ಸಾಂಸ್ಕೃತಿಕ ಪ್ರತಿಭೆ ಮತ್ತು ಶೈಕ್ಷಣಿಕ ಪ್ರಗತಿಯನ್ನು ಪ್ರದರ್ಶಿಸುವ ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ೨೦೨೫-೨೬ನೇ ಸಾಲಿನ ವಾರ್ಷಿಕೋತ್ಸವವು ಮೇ 18 ರಂದು ಸೋಮವಾರ ಕಾಲೇಜಿನ ಒಳಾಂಗಣದ ಆವರಣದಲ್ಲಿ ಜರುಗಲಿದೆ.

ಬೆ. 10-30 ಗಂಟೆಗೆ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರೂ ಆಗಿರುವ ಹರಿಹರ ಶಾಸಕರಾದ ಬಿ.ಪಿ ಹರೀಶ್ ಅವರು ಕಾಲೇಜು ವಾರ್ಷಿಕೋತ್ಸವಕ್ಕೆ ಚಾಲನೆ ನೀಡುವರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೇಶ್ ಎಂ‌.ಎನ್ ಅವರು ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರು, ಗಣ್ಯರು ಭಾಗವಹಿಸುವರು.

ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಗಣ್ಯರು ಬಹುಮಾನ ವಿತರಿಸುವರು.

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಾಂಶುಪಾಲರಾದ ಡಾ.‌ ರಮೇಶ್ ಎಂ.ಎನ್ ಅವರು ಕರ್ನಾಟಕ ಕಹಳೆ ಡಾಟ್ ಕಾಮ್ ಗೆ ತಿಳಿಸಿದ್ದಾರೆ.

—–

The post ನಾಳೆ(ಮೇ‌18) ಹರಿಹರ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವಾರ್ಷಿಕೋತ್ಸವ appeared first on Karnataka Kahale.

]]>
ಅನುದಿನ ಕವನ-೧೯೨೫, ಕವಯತ್ರಿ:ಮಂಜುಳಾ ಭಾರ್ಗವಿ, ಬೆಂಗಳೂರು https://www.karnatakakahale.com/news/22840 Sun, 17 May 2026 07:48:45 +0000 https://www.karnatakakahale.com/?p=22840 ನಂಬಿ!! ನೋಟವನ್ನಷ್ಟೇ ಮುಟ್ಟಿ ಬಂದೆ. ಬೇರೆ ಯಾವುದರ ಸ್ಪರ್ಶವೂ ನನಗೆ ನೆನಪಿಲ್ಲ. ರಾತ್ರಿಯಿಡೀ ಸಂಭಾಷಣೆಯಲ್ಲಿ ತೊಡಗಿದ್ದೆ. ಚೂರು ವಿಶ್ರಮಿಸುವೆ. ಕನಸಿನ ನೆನಪಿಲ್ಲ. ಒಡಲಲ್ಲೀಗ ಪ್ರೀತಿಯ ನದಿ ಕದಲುತ್ತಿದೆ. ಜೀವನ್ಮುಖಿ ಹಾಕಿದ ಹುಟ್ಟ ನೆನಪಿಲ್ಲ. ಮುಳ್ಳ ಬೇಲಿಗಳನ್ನೆಲ್ಲ ಹೂವಾಗಿಸುವಷ್ಟು ದಿಟ್ಟ ಪ್ರೇಮಿಯ ಮುಖ…

The post ಅನುದಿನ ಕವನ-೧೯೨೫, ಕವಯತ್ರಿ:ಮಂಜುಳಾ ಭಾರ್ಗವಿ, ಬೆಂಗಳೂರು appeared first on Karnataka Kahale.

]]>
ನಂಬಿ!! ನೋಟವನ್ನಷ್ಟೇ ಮುಟ್ಟಿ ಬಂದೆ.
ಬೇರೆ ಯಾವುದರ ಸ್ಪರ್ಶವೂ ನನಗೆ ನೆನಪಿಲ್ಲ.

ರಾತ್ರಿಯಿಡೀ ಸಂಭಾಷಣೆಯಲ್ಲಿ ತೊಡಗಿದ್ದೆ.
ಚೂರು ವಿಶ್ರಮಿಸುವೆ. ಕನಸಿನ ನೆನಪಿಲ್ಲ.

ಒಡಲಲ್ಲೀಗ ಪ್ರೀತಿಯ ನದಿ ಕದಲುತ್ತಿದೆ.
ಜೀವನ್ಮುಖಿ ಹಾಕಿದ ಹುಟ್ಟ ನೆನಪಿಲ್ಲ.

ಮುಳ್ಳ ಬೇಲಿಗಳನ್ನೆಲ್ಲ ಹೂವಾಗಿಸುವಷ್ಟು
ದಿಟ್ಟ ಪ್ರೇಮಿಯ ಮುಖ ನೆನಪಿಲ್ಲ.

ಇಳೆ ತಂಪು ತನುವಾಗುತ್ತಿದೆ
ಮಳೆ ಸುರಿದ ನೆನಪಿಲ್ಲ.

ನಿದಿರೆಗೆಟ್ಟ ತಾರೇ ಆಗಸದ ತುಂಬೆಲ್ಲ
ನಕ್ಷತ್ರಗಳ ಎಣಿಸಿದ್ದೆ ಲೆಕ್ಕ ನೆನಪಿಲ್ಲ.

ಮಾಯಾವಿ ಕೌದಿ ಹೊದಿಸಿದ್ದು ಯಾರು?
ತೋಳ ತೆಕ್ಕೆ ತಬ್ಬುಗೆಯ ನೆನಪಿಲ್ಲ.

ಮಳೆಯಂತವಳ ಒಡಲಲ್ಲೀಗ
ನೂರು ಕಡಲು ಅಲೆಗಳ ನೆನಪಿಲ್ಲ.


-ಮಂಜುಳಾ ಭಾರ್ಗವಿ, ಬೆಂಗಳೂರು

The post ಅನುದಿನ ಕವನ-೧೯೨೫, ಕವಯತ್ರಿ:ಮಂಜುಳಾ ಭಾರ್ಗವಿ, ಬೆಂಗಳೂರು appeared first on Karnataka Kahale.

]]>
ವಿದ್ಯಾರ್ಥಿಗಳು ಉತ್ತಮ ಭವಿಷ್ಯದ ಜೀವನ ರೂಪಿಸಿಕೊಳ್ಳಲು ಎನ್ ಎಸ್ ಎಸ್ ಸಹಕಾರಿ -ಪ್ರಾಂಶುಪಾಲ ಡಾ.ರಮೇಶ್.ಎಂಎನ್ https://www.karnatakakahale.com/news/22810 Wed, 22 Apr 2026 00:19:20 +0000 https://www.karnatakakahale.com/?p=22810 ಹರಿಹರ: ರಾಷ್ಟೀಯ ಸೇವಾ ಯೋಜನೆಯಂತಹ ಚಟುವಟಿಕೆಗಳಿಂದ ಸ್ವಯಂ ಶಿಸ್ತು ಕಲಿಕೆ ಸಾಧ್ಯವಾಗುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ರಮೇಶ್.ಎಂ.ಎನ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕ-೧ ಮತ್ತು ೨ ರ ವತಿಯಿಂದ…

The post ವಿದ್ಯಾರ್ಥಿಗಳು ಉತ್ತಮ ಭವಿಷ್ಯದ ಜೀವನ ರೂಪಿಸಿಕೊಳ್ಳಲು ಎನ್ ಎಸ್ ಎಸ್ ಸಹಕಾರಿ -ಪ್ರಾಂಶುಪಾಲ ಡಾ.ರಮೇಶ್.ಎಂಎನ್ appeared first on Karnataka Kahale.

]]>

ಹರಿಹರ: ರಾಷ್ಟೀಯ ಸೇವಾ ಯೋಜನೆಯಂತಹ ಚಟುವಟಿಕೆಗಳಿಂದ ಸ್ವಯಂ ಶಿಸ್ತು ಕಲಿಕೆ ಸಾಧ್ಯವಾಗುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ರಮೇಶ್.ಎಂ.ಎನ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕ-೧ ಮತ್ತು ೨ ರ ವತಿಯಿಂದ ತಾಲೂಕಿನ ಸಾಲಕಟ್ಟೆ ಗ್ರಾಮದಲ್ಲಿ ೭ ದಿನಗಳ ಕಾಲ ಜರುಗಿದ ‘ವಿಕಸಿತ ಭಾರತದೆಡೆಗೆ ಯುವಜನತೆ’ ಎಂಬ ಧ್ಯೇಯದ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಉತ್ರಮ ಭವಿಷ್ಯದ ಜೀವನ ರೂಪಿಸಿಕೊಳ್ಳಲು, ಔದ್ಯೋಗಿಕ ಬೆಳವಣಿಗೆಗೆ ಎನ್‌ಎಸ್‌ಎಸ್‌ನ ಚಟುವಟಿಕೆಗಳು ಸಹಕಾರಿಯಾಗಿವೆ ಎಂದು ಹೇಳಿದರು.                                          ಸ್ವಚ್ಚತೆಗೆ ಅಧ್ಯತೆ ನೀಡಿ, ಸೇವಾ ಮನೋಭಾವವನ್ನು ಯುವಜನತೆ ಹೊಂದಬೇಕು ಎಂದು ಆಶಯ ವ್ಯಕ್ತಪಡಿಸಿ, ೭ ದಿನಗಳ ಕಾಲ ಶಿಬಿರದ ಸಮಯದಲ್ಲಿ ಸಹಕಾರ ನೀಡಿದ ಗ್ರಾಮದ ಜನತೆಗೆ ಧನ್ಯವಾದಗಳನ್ನು ಸಲ್ಲಿಸಿದರು.


ತಾಲೂಕಿನ ಮುಖ್ಯೋಪಾಧ್ಯಯರ ಸಂಘದ ಅಧ್ಯಕ್ಷರಾದ ಆರ್.ಆರ್.ಮಠ ಅವರು ಮಾತನಾಡಿ, ಶಿಕ್ಷಣಕ್ಕೆ ಅಧ್ಯತೆ ನೀಡುವ ಸಮಾಜ ಸ್ವಯಂ ಅಭಿವೃದ್ಧಿ ಆಗುತ್ತದೆ. ಉನ್ನತ ಶಿಕ್ಷಣ ಹೊಂದಿದ ಯುವಜನರು ಮಕ್ಕಳಲ್ಲಿ ಶಿಕ್ಷಣದ ಪ್ರಾಮುಖ್ಯತೆಯನ್ನು ತಿಳಿಹೇಳಿ, ಮನವೊಲಿಸಲು ಮನವಿ ಮಾಡಿದರು. ಹಾಗೂ ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯ ಶಿಕ್ಷಣ ಹಿನ್ನೆಲೆಯಲ್ಲಿ ಸರ್ಕಾರ ನೀಡುವ ಪೌಷ್ಠಿಕ ಆಹಾರ, ಸಮವಸ್ತç, ಪಾದರಕ್ಷೆ, ಪಠ್ಯ ಪುಸ್ತಕ, ಪಠ್ಯೇತರ ಚಟುವಟಿಕೆಗಳ ಸಮಾಗ್ರಿಗಳು ಹಾಗೂ ಇನ್ನಿತರ ಸೌಲಭ್ಯಗಳನ್ನು ವಿವರಿಸಿದರು.
ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ತಿಪ್ಪೇಸ್ವಾಮಿ.ಹೆಚ್ ಅವರು ಸಮಾರೋಪ ಭಾಷಣ ಮಾಡಿದರು. ಐ.ಕ್ಯೂ.ಎಸ್.ಸಿ ಸಂಯೋಜಕರಾದ ಡಾ.ಅನಂತನಾಗ್.ಹೆಚ್.ಪಿ, ಮುಖ್ಯೋಪಾಧ್ಯಯರಾದ ಡಿ.ಎಂ.ಮಂಜುನಾಥ್, ಶಿಕ್ಷಕರುಗಳಾದ ಆರ್.ಬಿ.ಮಲ್ಲಿಕಾರ್ಜುನ, ಮಹಾಂತೇಶ್.ಡಿ.ಎನ್, ಎಫ್.ಸಿ.ಐ ನೌಕರರಾದ ಪರಶುರಾಮ್, ಕೆ.ಎನ್.ದೇವರಾಜ್, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳಾದ ಯೋಗೇಶ್.ಕೆ.ಜೆ, ಹನುಮಂತಪ್ಪ.ಕೆ.ವೈ, ಇತಿಹಾಸ ವಿಭಾಗದ ಉಪನ್ಯಾಸಕರಾದ ರಾಜಪ್ಪ.ಎ ಅವರುಗಳು ಉಪಸ್ಥಿತರಿದ್ದು ಮಾತನಾಡಿದರು.

The post ವಿದ್ಯಾರ್ಥಿಗಳು ಉತ್ತಮ ಭವಿಷ್ಯದ ಜೀವನ ರೂಪಿಸಿಕೊಳ್ಳಲು ಎನ್ ಎಸ್ ಎಸ್ ಸಹಕಾರಿ -ಪ್ರಾಂಶುಪಾಲ ಡಾ.ರಮೇಶ್.ಎಂಎನ್ appeared first on Karnataka Kahale.

]]>
ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ -ಮುಖ್ಯಮಂತ್ರಿ ಸಿದ್ದರಾಮಯ್ಯ https://www.karnatakakahale.com/news/22805 Sun, 19 Apr 2026 11:59:05 +0000 https://www.karnatakakahale.com/?p=22805 ಹಾವೇರಿ, ಏ. 19: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಅವರು ಭಾನುವಾರ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ಮಹಿಳೆಯರಿಗೆ…

The post ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ -ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Karnataka Kahale.

]]>

ಹಾವೇರಿ, ಏ. 19: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಅವರು ಭಾನುವಾರ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ , ಸಂವಿಧಾನದ 73, 74 ನೇ ತಿದ್ದುಪಡಿಗಳನ್ನು ರಾಜೀವ್ ಗಾಂಧಿಯವರು ಪ್ರಧಾನ ಮಂತ್ರಿಯಾಗಿದ್ದಾಗ ತಂದಿದ್ದರು. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ. ಈಗ ಮಾತ್ರ ಮಹಿಳಾ ಮೀಸಲಾತಿಗೆ ಒತ್ತಾಯಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಕ್ಷೇತ್ರ ಮರುವಿಂಗಡನೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ. ದಕ್ಷಿಣದಲ್ಲಿ 50% ಮಾಡಿದರೆ ಉತ್ತರ ಪ್ರದೇಶದಲ್ಲಿ 80 ಸ್ಥಾನಗಳಿವೆ. ಅಲ್ಲಿಗೆ 120 ಸ್ಥಾನಗಳಾಗುತ್ತವೆ. ಕರ್ನಾಟಕದಲ್ಲಿ 42 ಸ್ಥಾನಗಳಾಗುತ್ತವೆ. ಉತ್ತರ ಭಾರತದಲ್ಲಿ ಸ್ಥಾನಗಳು ಹೆಚ್ಚಾಗುವುದರ ಬಗ್ಗೆ ನಮ್ಮ ವಿರೋಧವೇ ಹೊರತು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ. ಅದರ ಪರವಾಗಿದ್ದೇವೆ ಎಂದರು.
ಸಂವಿಧಾನ ತಿದ್ದುಪಡಿಗೆ ಮೂರನೇ ಎರಡರಷ್ಟು ಬಹುಮತ ಲೋಕಸಭೆಯಲ್ಲಿ ಇರಬೇಕು. 50% ರಾಜ್ಯಗಳು ಇದಕ್ಕೆ ಒಪ್ಪಿಗೆ ನೀಡಬೇಕು ಎಂದರು. ಕ್ಷೇತ್ರ ಮರು ವಿಂಗಡಣೆಗೆ ವಿರೋಧ ಮಾಡಿದ್ದೇವೆ ಹೊರತು ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದು ಹೇಳಿದರು.

ಪ್ರಧಾನಮಂತ್ರಿಗಳಿಂದ ರಾಜಕೀಯ:  ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಗಳು ಎಂದು ಭಾಷಣ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ತಮಿಳುನಾಡು , ಪಶ್ಚಿಮ ಬಂಗಾಳದ ಚುನಾವಣೆ ಇರುವುದರಿಂದ ರಾಜಕೀಯ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಪಕ್ಷ ಎಂದಿಗೂ ವಿರೋಧ ಮಾಡಿಲ್ಲ:  450 ಮತಗಳನ್ನು ಪಡೆದು ಅಂಗೀಕಾರವಾಗಿರುವ ಮಸೂದೆಯನ್ನು ಮೋದಿಯವರು ಏಕೆ ಜಾರಿಮಾಡಲಿಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಕ್ಷೇತ್ರ ಮರುವಿಂಗಡನೆಯನ್ನು ಬೇರ್ಪಡಿಸಿ ಮಸೂದೆ ತಂದಿದ್ದರೆ, ಯಾರೂ ವಿರೋಧಿಸುತ್ತಿರಲಿಲ್ಲ.
ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಪಕ್ಷ ಎಂದಿಗೂ ವಿರೋಧ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಮೇಲ್ಮನವಿಗೆ ಅವಕಾಶ:  ಜನಪ್ರತಿನಿಧಿಗಳು ಜೈಲು ಸೇರುತ್ತಿರುವುದರ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ ಎಂದರು.

ಮಟ್ಕಾ ದಂಧೆ ನಿಯಂತ್ರಣದಲ್ಲಿದೆ: ರಾಣೆಬೆನ್ನೂರು ಸುತ್ತ ಮುತ್ತ ಮಟ್ಕಾ ದಂಧೆ ವ್ಯಾಪಕವಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಸ್ಥಳೀಯ ಶಾಸಕರು ಕ್ರಮ ಕೈಗೊಂಡಿದ್ದಾರೆ ಎಂದ ಮುಖ್ಯಮಂತ್ರಿಗಳು  ಪ್ರಸ್ತುತ ಮಟ್ಕಾ ದಂಧೆ ನಿಯಂತ್ರಣದಲ್ಲಿದೆ ಎಂದರು.

The post ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ -ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Karnataka Kahale.

]]>
ಬಳ್ಳಾರಿ ಮಹಾನಗರ ಪಾಲಿಕೆ‌ ನಿವೃತ್ತ ಅಧಿಕಾರಿ ಸಿ. ಯಮನಪ್ಪ ವಿಧಿವಶ https://www.karnatakakahale.com/news/22799 Fri, 17 Apr 2026 17:51:23 +0000 https://www.karnatakakahale.com/?p=22799 ಬಳ್ಳಾರಿ, ಏ.17: ಬಳ್ಳಾರಿ ಮಹಾನಗರ ಪಾಲಿಕೆ‌ ಹಾಗೂ ತೆಕ್ಕಲಕೋಟೆ ಪಟ್ಟಣ ಪಂಚಾಯತಿ ನಿವೃತ್ತ ಅಧಿಕಾರಿ ಸಿ. ಯಮನಪ್ಪ ಅವರು ಗುರುವಾರ ನಿಧನರಾಗಿದ್ದಾರೆ. ಅವರಿಗೆ 87 ವರ್ಷವಾಗಿತ್ತು. ಪತ್ನಿ ಜಾನಮ್ಮ, ಪುತ್ರರಾದ ಸಿ. ರವೀಂದ್ರ, ಡಾ. ವೈ. ವಿಶ್ವನಾಥ್, ಸಿ.ಗಂಗಾಧರ್, ಪುತ್ರಿಯರಾದ ಪ್ರೊ.…

The post ಬಳ್ಳಾರಿ ಮಹಾನಗರ ಪಾಲಿಕೆ‌ ನಿವೃತ್ತ ಅಧಿಕಾರಿ ಸಿ. ಯಮನಪ್ಪ ವಿಧಿವಶ appeared first on Karnataka Kahale.

]]>
ಸಿ.ಯಮನಪ್ಪ

ಬಳ್ಳಾರಿ, ಏ.17: ಬಳ್ಳಾರಿ ಮಹಾನಗರ ಪಾಲಿಕೆ‌ ಹಾಗೂ ತೆಕ್ಕಲಕೋಟೆ ಪಟ್ಟಣ ಪಂಚಾಯತಿ ನಿವೃತ್ತ ಅಧಿಕಾರಿ ಸಿ. ಯಮನಪ್ಪ ಅವರು ಗುರುವಾರ ನಿಧನರಾಗಿದ್ದಾರೆ.

ಅವರಿಗೆ 87 ವರ್ಷವಾಗಿತ್ತು. ಪತ್ನಿ ಜಾನಮ್ಮ, ಪುತ್ರರಾದ ಸಿ. ರವೀಂದ್ರ, ಡಾ. ವೈ. ವಿಶ್ವನಾಥ್, ಸಿ.ಗಂಗಾಧರ್, ಪುತ್ರಿಯರಾದ ಪ್ರೊ. ಸುಲೋಚನಾ ಮತ್ತು ಪ್ರೊ. ಶೋಭ ಸೇರಿದಂತೆ ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು‌ಮಿತ್ರರನ್ನು ಅಗಲಿದ್ದಾರೆ.

ಗುರುವಾರ ಸಂಜೆ ಕೌಲಬಜಾರ್ ನ ಗುಗ್ಗರಹಟ್ಟಿ ರಸ್ತೆಯಲ್ಲಿರುವ ರುದ್ರ ಭೂಮಿಯಲ್ಲಿ ಅಪಾರ ಬಂಧು ಮಿತ್ರರ ಸಮ್ಮುಖದಲ್ಲಿ ಅಂತಿಮ‌ಸಂಸ್ಕಾರ‌ ನೆರವೇರಿಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಮ್ಮ ತಂದೆ ಸಿ.‌ಯಮನಪ್ಪ ಅವರು ತೆಕ್ಕಲಕೋಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಸಂದರ್ಭದಲ್ಲಿ ಆಡಳಿತದಲ್ಲಿ ಕನ್ನಡ ಗರಿಷ್ಟ ಬಳಕೆಗಾಗಿ ಅಂದಿನ ಜಿಲ್ಲಾ‌ಉಸ್ತುವಾರಿ ಸಚಿವ ಎಂ.ಪಿ. ಪ್ರಕಾಶ ಅವರು ಜಿಲ್ಲಾಡಳಿತದ ಪರವಾಗಿ ಪ್ರಶಸ್ತಿ ನೀಡಿ ಗೌರವಿಸಿದ್ದರು ಎಂದು ಬಳ್ಳಾರಿ ಮೆಡಿಕಲ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ವೈ.‌ವಿಶ್ವನಾಥ್ ಸ್ಮರಿಸಿದ್ದಾರೆ.

ಸಂತಾಪ: ಸಿ. ಯಮನಪ್ಪ ಅವರ  ನಿಧನಕ್ಕೆ ಹಿರಿಯ ಸಾಹಿತಿ ಡಾ.‌ವೆಂಕಟಯ್ಯ ಅಪ್ಪಗೆರೆ, ಗುಲ್ಬರ್ಗಾ ವಿವಿ ಮಾಜಿ ಸೆನೆಟ್ ಸದಸ್ಯ, ಹಿರಿಯ ಪತ್ರಕರ್ತ ಸಿ. ಮಂಜುನಾಥ, ಬಳ್ಳಾರಿ ಐಜಿಪಿ ಕಚೇರಿಯ ನಿವೃತ್ತ ಆಡಳಿತಾಧಿಕಾರಿ ಕೆ.ಮಾರುತಿ, ನಿವೃತ್ತ ಪ್ರಾಚಾರ್ಯ ಡಾ. ಸಿ ಎಚ್ ಸೋಮನಾಥ, ತಹಸೀಲ್ದಾರರಾದ ಹೊನ್ನಮ್ಮ, ಬಳ್ಳಾರಿ ಮೆಡಿಕಲ್ ಕಾಲೇಜ್ ಪ್ರಾಧ್ಯಾಪಕ ಡಾ. ವಿಜಯ್ ಅಪ್ಪಗೆರೆ, ಎಸ್.ಪಿ ಕಚೇರಿಯ ಎಎಸ್ಐ ಸಿ. ಹನುಮಂತಪ್ಪ, ಕಾಡಾ ನಿವೃತ್ತ ಅಧಿಕಾರಿ ಗುರುಸ್ವಾಮಿ, ಸಿಎಂಎಸ್ ಮುಖಂಡ ಸಿ. ನರಸಪ್ಪ ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು  ಪ್ರಾರ್ಥಿಸಿದ್ದಾರೆ.

The post ಬಳ್ಳಾರಿ ಮಹಾನಗರ ಪಾಲಿಕೆ‌ ನಿವೃತ್ತ ಅಧಿಕಾರಿ ಸಿ. ಯಮನಪ್ಪ ವಿಧಿವಶ appeared first on Karnataka Kahale.

]]>
ಪ್ರಾಧ್ಯಾಪಕ ವೃತ್ತಿಗೆ ಘನತೆ ತಂದುಕೊಟ್ಟವರು ಜಿ.ಎಸ್.ಎಸ್. -ಡಾ. ಕುಮಾರಚಲ್ಯ https://www.karnatakakahale.com/news/22796 Thu, 16 Apr 2026 13:02:05 +0000 https://www.karnatakakahale.com/?p=22796 ಶಂಕರಘಟ್ಟ, ಏ . 16: ಸರಳತೆ , ಸಜ್ಜನಿಕೆ, ಶಿಸ್ತು, ಪ್ರಾಮಾಣಿಕತೆ, ಆತ್ಮವಿಶ್ವಾಸ, ಆತ್ಮಾಭಿಮಾನದ ಸಂಗಮ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಅವರು ಪ್ರಾಧ್ಯಾಪಕ ವೃತ್ತಿಗೆ ಘನತೆ ತಂದುಕೊಟ್ಟವರು ಎಂದು ಹಿರಿಯ ಸಾಹಿತಿ ಡಾ. ಕುಮಾರಚಲ್ಯ ಅವರು ಅಭಿಪ್ರಾಯಪಟ್ಟರು. ಅವರು ಕುವೆಂಪು ವಿಶ್ವವಿದ್ಯಾಲಯದ…

The post ಪ್ರಾಧ್ಯಾಪಕ ವೃತ್ತಿಗೆ ಘನತೆ ತಂದುಕೊಟ್ಟವರು ಜಿ.ಎಸ್.ಎಸ್. -ಡಾ. ಕುಮಾರಚಲ್ಯ appeared first on Karnataka Kahale.

]]>
ಶಂಕರಘಟ್ಟ, ಏ . 16: ಸರಳತೆ , ಸಜ್ಜನಿಕೆ, ಶಿಸ್ತು, ಪ್ರಾಮಾಣಿಕತೆ, ಆತ್ಮವಿಶ್ವಾಸ, ಆತ್ಮಾಭಿಮಾನದ ಸಂಗಮ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಅವರು ಪ್ರಾಧ್ಯಾಪಕ ವೃತ್ತಿಗೆ ಘನತೆ ತಂದುಕೊಟ್ಟವರು ಎಂದು ಹಿರಿಯ ಸಾಹಿತಿ ಡಾ. ಕುಮಾರಚಲ್ಯ ಅವರು ಅಭಿಪ್ರಾಯಪಟ್ಟರು.
ಅವರು ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಭಾರತಿ ವಿಭಾಗವು ಕರ್ನಾಟಕ ಸಾಹಿತ್ಯ ಅಕಾಡೆಮಿ, ಜಿ. ಎಸ್. ಶಿವರುದ್ರಪ್ಪ ಪ್ರತಿಷ್ಠಾನದ ಸಹಯೋಗದಲ್ಲಿ ಏರ್ಪಡಿಸಿದ್ದ ‘ಜಿ.ಎಸ್.ಶಿವರುದ್ರಪ್ಪ: ಮರು ಓದಿನ ನೆಲೆಗಳು’ ಎಂಬ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಸಮಾರೋಪ ಭಾಷಣ ಮಾಡಿದರು. ಅಧ್ಯಯನ, ಅಧ್ಯಾಪನ ಮತ್ತು ಸೃಜನಶೀಲತೆಗೆ ಅನನ್ಯ ಕಾಣ್ಕೆ ನೀಡಿದವರು ಜಿಎಸ್ಎಸ್ ಎಂದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ
ಎಲ್. ಎನ್. ಮುಕುಂದರಾಜ್ ಅವರು, ಜಿಎಸ್ಎಸ್ ಕನ್ನಡ ಸಂಸ್ಕೃತಿಗೆ ಹೊಸ ಚಿಂತನೆಗಳನ್ನು ನೀಡಿದವರು ಎಂದು ‌ಹೇಳಿದರು. ಸಾಹಿತಿ ಬಸವರಾಜ ಕಲ್ಗುಡಿ, ಕೇಶವ ಶರ್ಮ, ಹೊಸಳ್ಳಿ ದಾಳೇಗೌಡರು, ಉಮಾಪತಿ,
ಕನ್ನಡ ಭಾರತಿ ನಿರ್ದೇಶಕರಾದ ಪ್ರೊ ನೆಲ್ಲಿಕಟ್ಟೆ ಎಸ್ ಸಿದ್ದೇಶ್ , ಡಾ. ಚಂದ್ರಿಕಾ , ಡಾ ನಾಗೇಂದ್ರ ಆಚಾರ್ಯ ಉಪಸ್ಥಿತರಿದ್ದರು. ಪ್ರತಿಷ್ಠಾನದ ಡಾ. ಸಾಸ್ವೇಹಳ್ಳಿ ಸತೀಶ್ ಸ್ವಾಗತಿಸಿದರು,
ಡಾ. ನವೀನ್ ಮಂಡಗದ್ದೆ ನಿರೂಪಿಸಿದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ಸಂಶೋಧನಾರ್ಥಿಗಳು, ಸಾಹಿತಿಗಳು ಆಗಮಿಸಿದ್ದರು.
*****

The post ಪ್ರಾಧ್ಯಾಪಕ ವೃತ್ತಿಗೆ ಘನತೆ ತಂದುಕೊಟ್ಟವರು ಜಿ.ಎಸ್.ಎಸ್. -ಡಾ. ಕುಮಾರಚಲ್ಯ appeared first on Karnataka Kahale.

]]>
ಮೊಬೈಲ್ ಯುವ ಪೀಳಿಗೆಗೆ ಮಾರಕ: ಪಿಎಸ್‌ಐ ಮಂಜುಳ.ಡಿ ಕಿವಿಮಾತು https://www.karnatakakahale.com/news/22791 Thu, 16 Apr 2026 06:47:10 +0000 https://www.karnatakakahale.com/?p=22791 ಹರಿಹರ: ಯುವ ಸಮೂಹ ಮೊಬೈಲ್ ಗೀಳು ಬಿಟ್ಟು ಪರಿಶ್ರಮದಿಂದ ಅಧ್ಯಯನ ಮಾಡಬೇಕು. ದುಶ್ಚಟಗಳಿಂದ ದೂರವಿದ್ದು, ಮಾದರಿ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಗ್ರಾಮಾಂತರ ಪೋಲಿಸ್ ಉಪನಿರೀಕ್ಷಕರಾದ ಶ್ರೀಮತಿ ಮಂಜುಳ.ಡಿ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್…

The post ಮೊಬೈಲ್ ಯುವ ಪೀಳಿಗೆಗೆ ಮಾರಕ: ಪಿಎಸ್‌ಐ ಮಂಜುಳ.ಡಿ ಕಿವಿಮಾತು appeared first on Karnataka Kahale.

]]>

ಹರಿಹರ: ಯುವ ಸಮೂಹ ಮೊಬೈಲ್ ಗೀಳು ಬಿಟ್ಟು ಪರಿಶ್ರಮದಿಂದ ಅಧ್ಯಯನ ಮಾಡಬೇಕು. ದುಶ್ಚಟಗಳಿಂದ ದೂರವಿದ್ದು, ಮಾದರಿ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಗ್ರಾಮಾಂತರ ಪೋಲಿಸ್ ಉಪನಿರೀಕ್ಷಕರಾದ ಶ್ರೀಮತಿ ಮಂಜುಳ.ಡಿ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕ-೧ ಮತ್ತು ೨ ರ ವತಿಯಿಂದ ತಾಲೂಕಿನ ಸಾಲಕಟ್ಟೆ ಆಯೋಜಿಸಿರುವ ವಾರ್ಷಿಕ ಶಿಬಿರದ ಮೂರನೆಯ ದಿನದ ಸಂಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.                                        ಇತ್ತೀಚಿಗೆ ನಡೆಯುತ್ತಿರುವ ಸೈಬರ್ ಕ್ರೈಂಗಳ ಬಗ್ಗೆ ಯುವಜನತೆಯನ್ನು ಎಚ್ಚರಿಸಿದರು. ವಿದ್ಯಾರ್ಥಿಗಳು ಪರಿಶ್ರಮದಿಂದ ತಮ್ಮ ಗುರಿಗಳನ್ನು ಸಾಧಿಸಲು ಸಾಧ್ಯ. ಪೋಷಕರು ಮಕ್ಕಳ ನಡವಳಿಕೆ ಮೇಲೆ ನಿಗಾ ವಹಿಸುವ ಅವಶ್ಯಕತೆ ಇದೆ ಎಂದು ಹೇಳಿದರು.

ಕಾಲೇಜಿನ ಹಳೇ ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷರು ಮತ್ತು ವಕೀಲರು ಆಗಿರುವ ವೀರೇಶ್ ಬ.ಅಜ್ಜಣ್ಣನವರ್ ಮಾತನಾಡಿ, ಯುವ ಜನತೆ ಬಯಸಿದರೆ ಇಡೀ ದೇಶದಲ್ಲಿ ಪರಿವರ್ತನೆ ತರುತ್ತದೆ. ಇವರು ಡ್ರಗ್ಸ್, ಆಲ್ಕೋಹಾಲ್, ಗುಟ್ಕಾ ಮತ್ತು ಇತರೆ ಮಾದಕ ವಸ್ತುಗಳ ದಾಸರಾಗದಂತೆ ತಡೆಯಬೇಕು. ಇಂಥ ಪ್ರಕರಣಗಳಿದ್ದರೆ ಬೇಗ ಗುರುತಿಸಿ ಆಪ್ತ ಸಮಾಲೋಚನೆ ಮೂಲಕ ಬಿಡಿಸಬೇಕು. ತಜ್ಞರ ಸಲಹೆ ಪಡೆಯಬೇಕು. ಮೊಬೈಲ್ ದುರ್ಬಳಕೆ ತಡೆಗೂ ಇದು ಅನ್ವಯವಾಗುತ್ತದೆ ಎಂದರು.
ಗ್ರಾಮದ ಮುಖಂಡರಾದ ಎಸ್.ಬಿ.ವಿಶ್ವನಾಥ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಮದ ಮುಖಂಡರಾದ ಎಸ್.ಬಿ.ರೇವಣಸಿದ್ದಪ್ಪ, ಎಂ.ಜಿ.ಮಹದೇವಪ್ಪ, ಕೆ.ವೈ.ಅಶೋಕ, ಜಿ.ಸಿ.ಮಹೇಶ್ವರಪ್ಪ, ಶಿವನಂದಪ್ಪ ಇಟಿಗಿ, ಟಿ.ಎಂ.ವೀರಯ್ಯ, ಎ.ಎ.ದಂಡ್ಯೆಪಪ್ಪ ಇನ್ನಿತತರು ಹಾಗೂ ಕಾಲೇಜಿನ ವಾಣಿಜ್ಯಶಾಸ್ತçದ ಸಹ ಪ್ರಾಧ್ಯಾಪಕರಾದ ಡಾ.ದಾಕ್ಷಾಯಿಣಿ.ಜಿ.ಎನ್, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಮಮತಾ.ಹೆಚ್.ಸಾಹುಕಾರ, ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಶಮಾ ತುಮ್ಮಿನಕಟ್ಟಿ, ಗಣಕವಿಜ್ಞಾನ ವಿಭಾಗದ ಮುಖ್ಯಸ್ಥರಾದ ವೆಂಕಪ್ಪನವರ ಬಸವರಾಜು, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳಾದ ಯೋಗೇಶ್.ಕೆ.ಜೆ, ಹನುಮಂತಪ್ಪ.ಕೆ.ವೈ, ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸರಾದ ಶ್ರೀಮತಿ ನಾಗವೇಣಿ.ಆರ್.ಎಸ್, ಐಶ್ವರ್ಯ ಜೆ.ಶೆಟ್ಟರ್ ಅವರುಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ಶಿಬಿರಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

The post ಮೊಬೈಲ್ ಯುವ ಪೀಳಿಗೆಗೆ ಮಾರಕ: ಪಿಎಸ್‌ಐ ಮಂಜುಳ.ಡಿ ಕಿವಿಮಾತು appeared first on Karnataka Kahale.

]]>
ಪಲ್ಲವ ವೆಂಕಟೇಶ್ ಅವರಿಗೆ ಮಾತೃ ವಿಯೋಗ https://www.karnatakakahale.com/news/22782 Thu, 16 Apr 2026 02:25:08 +0000 https://www.karnatakakahale.com/?p=22782 ಬಳ್ಳಾರಿ, ಏ.15: ರಾಯಚೂರಿನ ಮಹರ್ಷಿ ಶ್ರೀ ವಾಲ್ಮೀಕಿ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಕೆ. ವೆಂಕಟೇಶ್ (ಪಲ್ಲವ ವೆಂಕಟೇಶ್) ಅವರ ತಾಯಿ ಶ್ರೀಮತಿ ಕೆ. ಈರಮ್ಮ ಅವರು ಸಿರುಗುಪ್ಪ ತಾಲೂಕಿನ ಚನ್ನಪಟ್ಟಣ ಗ್ರಾಮದಲ್ಲಿ ಬುಧವಾರ ನಸುಕಿನ ಜಾವ ನಿಧನರಾಗಿದ್ದಾರೆ.…

The post ಪಲ್ಲವ ವೆಂಕಟೇಶ್ ಅವರಿಗೆ ಮಾತೃ ವಿಯೋಗ appeared first on Karnataka Kahale.

]]>
ಬಳ್ಳಾರಿ, ಏ.15: ರಾಯಚೂರಿನ ಮಹರ್ಷಿ ಶ್ರೀ ವಾಲ್ಮೀಕಿ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಕೆ. ವೆಂಕಟೇಶ್ (ಪಲ್ಲವ ವೆಂಕಟೇಶ್) ಅವರ ತಾಯಿ ಶ್ರೀಮತಿ ಕೆ. ಈರಮ್ಮ ಅವರು ಸಿರುಗುಪ್ಪ ತಾಲೂಕಿನ ಚನ್ನಪಟ್ಟಣ ಗ್ರಾಮದಲ್ಲಿ ಬುಧವಾರ ನಸುಕಿನ ಜಾವ ನಿಧನರಾಗಿದ್ದಾರೆ.
ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಈರಮ್ಮ ಅವರಿಗೆ 88 ವರ್ಷವಾಗಿತ್ತು. ಹಿರಿಯ ಪುತ್ರ ಕೆ. ತಿಪ್ಪೇಸ್ವಾಮಿ ಮತ್ತು ಪುತ್ರಿ ಸಿದ್ಧಲಿಂಗಮ್ಮ ಸೇರಿದಂತೆ ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಹದಿನೈದು ವರ್ಷಗಳ ಹಿಂದೆ ಪತಿ, ಗ್ರಾಮದ ಹಿರಿಯ ಮುಖಂಡ ಕೆ. ಸಿದ್ಧಲಿಂಗಪ್ಪ ಅವರು ವಿಧಿವಶವಾಗಿದ್ದಾರೆ.
ಅಪಾರ ಬಂಧು ಬಳಗದ ಸಮ್ಮುಖದಲ್ಲಿ ಮಧ್ಯಾಹ್ನ ಚನ್ನಪಟ್ಟಣದ ರುದ್ರಭೂಮಿಯಲ್ಲಿ ಅಂತಿಮ‌ಸಂಸ್ಕಾರ ನೆರವೇರಿತು.
ಹೊಸಪೇಟೆಯ ಎಎಸ್ಐ ದಳವಾಯಿ ಕೆ. ಮಲ್ಲೇಶಪ್ಪ, ಪ್ರಾಚಾರ್ಯ ಡಾ. ಟಿ. ಎಚ್. ಬಸವರಾಜ್, ಸಹಾಯಕ ಪ್ರಾಧ್ಯಾಪಕರಾದ ಡಾ. ಮಹೇಶ್, ಡಾ.‌ಮಲ್ಲಿಕಾರ್ಜುನ್, ಜಿಂದಾಲ್ ಕೆ.‌ಬಸವರಾಜ್, ಕೃಷ್ಣಮೂರ್ತಿ ಸೇರಿದಂತೆ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.
ಸಂತಾಪ: ಶ್ರೀಮತಿ ಈರಮ್ಮ ಅವರ ನಿಧನಕ್ಕೆ ಗುಲ್ಬರ್ಗಾ ವಿವಿ ಮಾಜಿ ಸೆನೆಟ್ ಸದಸ್ಯ, ಹಿರಿಯ ಪತ್ರಕರ್ತ ಸಿ. ಮಂಜುನಾಥ, ಹಿರಿಯ ಸಾಹಿತಿಗಳಾದ ಡಾ. ವೆಂಕಟಯ್ಯ ಅಪ್ಪಗೆರೆ, ಟಿ.ಕೆ.ಗಂಗಾಧರ ಪತ್ತಾರ್, ರಾಯಚೂರಿನ ಪ್ರಗತಿಪರ ರೈತ ಕೆ.‌ಎಂ ಗೌಡ, ಕುರುಗೋಡಿನ ಕೂನಾ ರಾಘವೇಂದ್ರ, ಪತ್ರಕರ್ತ ಸಿ. ಶಿವಾನಂದ ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ. ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

The post ಪಲ್ಲವ ವೆಂಕಟೇಶ್ ಅವರಿಗೆ ಮಾತೃ ವಿಯೋಗ appeared first on Karnataka Kahale.

]]>