The post ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ: ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ -ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Karnataka Kahale.
]]>
ಬೆಂಗಳೂರು, ಜ.4: ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ ಇದ್ದಂತೆ .ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆಯನ್ನು ಕಲ್ಪಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಭಾನುವಾರ ಕರ್ನಾಟಕ ಚಿತ್ರಕಲಾ ಪರಿಷತ್ತು ಇವರ ವತಿಯಿಂದ ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿರುವ ಕರ್ನಾಟಕ ಚಿತ್ರಕಲಾ ಪರಿಷತ್ತು ಆವರಣದಲ್ಲಿ ಆಯೋಜಿಸಲಾಗಿದ್ದ 23 ನೇ ಚಿತ್ರ ಸಂತೆ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯಮಂತ್ರಿಯಾಗಿ 8ನೇ ಬಾರಿ ಚಿತ್ರ ಸಂತೆಯಲ್ಲಿ ಭಾಗವಹಿಸುತ್ತಿರುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ಕಲಾವಿದರನ್ನು ಪ್ರೋತ್ಸಾಹಿಸುವುದು, ಅವರ ಚಿತ್ರಗಳ ಪ್ರದರ್ಶನ ಹಾಗೂ ಅವುಗಳ ಮಾರಾಟಕ್ಕೆ ವೇದಿಕೆ ಸೃಷ್ಟಿ ಮಾಡುವ ಕೆಲಸವನ್ನು ಚಿತ್ರಕಲಾ ಪರಿಷತ್ತು ಅರವತ್ತು ವರ್ಷಗಳಿಂದ ಮಾಡುತ್ತಾ ಬಂದಿದೆ. ಚಿತ್ರಸಂತೆ ತನ್ನ 23 ನೇ ವರ್ಷಕ್ಕೆ ಕಾಲಿಟ್ಟಿದೆ. ಸುಮಾರು 22 ರಾಜ್ಯಗಳು ನಾಲ್ಕು ಕೇಂದ್ರಾಡಳಿತ ಪ್ರದೇಶಗಳು ಕಾರ್ಯಕ್ರಮದಲ್ಲಿ ಭಾಗವಹಿಸಿವೆ ಎಂದರು.

ಪರಿಸರದ ರಕ್ಷಣೆ ಇಂದಿನ ಅಗತ್ಯ:
ಪ್ರತಿ ಜಿಲ್ಲೆಯಲ್ಲಿಯೂ ಸಾಧಕರ ವಸ್ತುಸಂಗ್ರಹಾಲಯಕ್ಕೆ ಬೇಡಿಕೆಯಿದ್ದು ಸರ್ಕಾರ ಅದನ್ನು ಸಕಾರಾತ್ಮಕವಾಗಿ ಸ್ವೀಕಾರ ಮಾಡಲಿದೆ ಎಂದರು. ಈ ಬಾರಿಯ ಚಿತ್ರ ಸಂತೆಯ ಧ್ಯೇಯ ವಾಕ್ಯ ಪರಿಸರಕ್ಕೆ ಸಮರ್ಪಿಸಲಾಗಿದೆ. ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಅದಕ್ಕಾಗಿ ಪರಿಸರದ ಬಗ್ಗೆ ಜ್ಞಾನ ಅಗತ್ಯ. ಈ ಕುರಿತು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಬೆಂಗಳೂರು ಸೇರಿದಂತೆ ದೇಶದ ಅನೇಕ ರಾಜಧಾನಿಗಳಲ್ಲಿ ಪರಿಸರ ಮಾಲಿನ್ಯ ಹೆಚ್ಚಾಗಿದ್ದು, ದೆಹಲಿಯಲ್ಲಿ ಬದುಕಲು ಸಾಧ್ಯವಿಲ್ಲದ ವಾತಾವರಣ ನಿರ್ಮಾಣವಾಗುತ್ತಿದೆ. ಪರಿಸರದ ರಕ್ಷಣೆ ಇಂದಿನ ಅಗತ್ಯವಾಗಿದೆ ಎಂದರು.
ಅರಣ್ಯೀಕರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು:
ಪ್ರತಿ ವರ್ಷ ಮೂರರಿಂದ ಐದು ಕೋಟಿ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಯಾವುದೇ ಪ್ರದೇಶದಲ್ಲಿ ಶೇ. 30ರಷ್ಟು ಕಾಡು ಇರಬೇಕು. ನಮ್ಮಲ್ಲಿ ಶೇಕಡ 20ರಷ್ಟು ಅರಣ್ಯ ಪ್ರದೇಶವಿದೆ. ಇದನ್ನು ಹೆಚ್ಚು ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದರು. ಸಾಲು ಮರದ ತಿಮ್ಮಕ್ಕ ನವರಂತೆ ಸಾರ್ವಜನಿಕರು ಗಿಡಗಳನ್ನು ನೆಡಬೇಕು. ಮಕ್ಕಳನ್ನು ಸಾಕಿದಂತೆ ಗಿಡಮರಗಳನ್ನು ಅವರು ಸಾಕಿದ್ದ ಕಾರಣ ಪ್ರಶಸ್ತಿಗಳು ದೊರೆಯಿತು. ಅವರ ಆತ್ಮಕ್ಕೆ ಶಾಂತಿ ದೊರಕಬೇಕಾದರೆ ನಾವೆಲ್ಲರೂ ಗಿಡ ಬೆಳೆಸುವ ಪ್ರಯತ್ನವನ್ನು ಮಾಡಬೇಕು ಎಂದರು.

ಗಿಡ ನಿಡಲು ಮನಸ್ಸು ಮಾಡಬೇಕು:
ಪರಿಸರ ರಕ್ಷಣೆಗಾಗಿ ಹೋರಾಟವನ್ನೇ ಕೈಗೊಂಡ ಅನೇಕರು ನಮ್ಮ ನಡುವೆಯೇ ಇದ್ದಾರೆ. ಗಿಡ ನೆಡಲು ಬಹಳ ಖರ್ಚು ಆಗುವುದಿಲ್ಲ. ಮನಸ್ಸು ಮಾಡಬೇಕಷ್ಟೆ. ಸರ್ಕಾರ ಕೂಡ ಈ ದಿಕ್ಕಿನಲ್ಲಿ ಹೆಚ್ಚಿನ ಆಸಕ್ತಿ ವಹಿಸಲಿದೆ ಎಂದರು.
ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್, ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್.ಶಂಕರ್ ಮೊದಲಾದವರು ಉಪಸ್ಥಿತರಿದ್ದರು.
The post ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ: ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ -ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Karnataka Kahale.
]]>The post ಕ್ರೀಡಾ ಚಟುವಟಿಕೆಗಳು ದೈಹಿಕ ಆರೋಗ್ಯಕ್ಕೆ ಪೂರಕವಾದರೆ, ಸಂಗೀತ, ನೃತ್ಯ, ಕಲಾ ಪ್ರಕಾರಗಳು ಮಾನಸಿಕ ಆರೋಗ್ಯ ವೃದ್ಧಿಗೆ ಸಹಕಾರಿ -ನ್ಯಾಯವಾದಿ ಕೆ.ಜಿತೇಂದ್ರ appeared first on Karnataka Kahale.
]]>
ಬಳ್ಳಾರಿ, ನ.28: ಕ್ರೀಡಾ ಚಟುವಟಿಕೆಗಳು ದೈಹಿಕ ಆರೋಗ್ಯಕ್ಕೆ ಪೂರಕವಾದರೆ, ಸಂಗೀತ, ನೃತ್ಯ, ಕಲಾ ಪ್ರಕಾರಗಳು ಮಾನಸಿಕ ಆರೋಗ್ಯ ವೃದ್ಧಿಗೆ ಸಹಕಾರಿಯಾಗಿವೆ ಎಂದು ವಕೀಲ ಹಾಗೂ ಪೊಲೀಸ್ ಜಿಮ್ ಖಾನಾ ಅಧ್ಯಕ್ಷ ಕೆ.ಜಿತೇಂದ್ರ ಅಭಿಪ್ರಾಯಪಟ್ಟರು.
ನಗರದ ಕೊಟ್ಟೂರು ಸ್ವಾಮಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶ್ರೀ ಮಂಜುನಾಥ ಲಲಿತ ಕಲಾ ಬಳಗ (ರಿ) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಂಗಳವಾರ ಜರುಗಿದ ‘ಕನ್ನಡ ಸುವರ್ಣ ಸಂಭ್ರಮ’ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬಳ್ಳಾರಿಯಲ್ಲಿ ನಿರಂತರವಾಗಿ ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ನಡೆಯುತ್ತಿರುವುದು ಶ್ಲಾಘನೀಯ. ವಿವಿಧ ಸಾಂಸ್ಕೃತಿಕ ಸಂಘಟನೆಗಳು ಕನ್ನಡ ಭಾಷೆ, ನೆಲ, ಜಲ, ಸಂಸ್ಕೃತಿಯನ್ನು ಉಳಿಸುವ ಕಾಳಜಿಯನ್ನು ಜತನದಿಂದ ಮುಂದುವರಿಸುವಂತಾಗಬೇಕು ಎಂದು ಆಶಿಸಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಿರಿಯ ನಿವೃತ್ತ ಅಧಿಕಾರಿ ಚೋರನೂರು ಕೊಟ್ರಪ್ಪ ಅವರು, ಗಣಿನೆಲದ ಸಾಂಸ್ಕೃತಿಕ ಗಟ್ಟಿತನ ಕುರಿತು ವಿವರಿಸಿದರಲ್ಲದೆ, ಪ್ರತಿಭಾನ್ವಿತ ಯುವ ಚಿತ್ರ ಕಲಾವಿದ ಮಂಜುನಾಥ ಗೋವಿಂದವಾಡ ಅವರ ಸಾಧನೆಯನ್ನು ಬಣ್ಣಿಸಿದರು.
ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷೆ ಕ್ಯಾತ್ಯಾಯಿನಿ ವಿ.ಎಸ್.ಮರಿದೇವಯ್ಯ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಯಶಸ್ವಿಗೆ ಹಾರೈಸಿದರು.
ಶ್ರೀ ಮಂಜುನಾಥ ಲಲಿತ ಕಲಾ ಬಳಗದ ಅಧ್ಯಕ್ಷ ಮಂಜುನಾಥ ಗೋವಿಂದವಾಡ ಪ್ರಾಸ್ತಾವಿಕ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಸತೀಶ್ ಎ. ಹಿರೇಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಟಿ.ಹೊನ್ನೂರಪ್ಪ, ಜಾನಪದ ಕಲಾವಿದ ಯಲ್ಲನಗೌಡ ಶಂಕರಬಂಡೆ, ನಿವೃತ್ತ ದೈಹಿಕ ಶಿಕ್ಷಕ ಸಿದ್ಧಲಿಂಗಸ್ವಾಮಿ, ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ ವಿ.ವಿ.ಗೌಡ ಕರೂರು ಹಾಗೂ ಚಂದ್ರಶೇಖರ ಗೌಡ ಕೋಳೂರು ಉಪಸ್ತಿತರಿದ್ದರು.
ಬಳಿಕ ಜಾನಪದ ಕಲಾವಿದ ಯಲ್ಲನಗೌಡ ಶಂಕರಬಂಡೆ ಮತ್ತು ತಂಡದಿಂದ ಸುಗಮಸಂಗೀತ, ಎಸ್ ಕೆ ಆರ್ ಜಿಲಾನಿಬಾಷಾ ತಂಡದಿಂದ ಜಾನಪದ ಸಮೂಹ ನೃತ್ಯ ಹಾಗೂ ಗಣೇಶಪ್ಪ ಮತ್ತು ತಂಡದಿಂದ ಡೊಳ್ಳು ಕುಣಿತ ಪ್ರದರ್ಶನಗೊಂಡವು.

ಇದೇ ವೇಳೆ ಐಎಂಎ ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಕೆ.ಎಂ.ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು.
ಕಾಲೇಜಿನ ವಿದ್ಯಾರ್ಥಿಗಳಾದ ಶಿಲ್ಪಾ ಮತ್ತು ಶ್ರಾವಣ್ ಕಾರ್ಯಕ್ರಮ ನಿರ್ವಹಿಸಿದರು.
The post ಕ್ರೀಡಾ ಚಟುವಟಿಕೆಗಳು ದೈಹಿಕ ಆರೋಗ್ಯಕ್ಕೆ ಪೂರಕವಾದರೆ, ಸಂಗೀತ, ನೃತ್ಯ, ಕಲಾ ಪ್ರಕಾರಗಳು ಮಾನಸಿಕ ಆರೋಗ್ಯ ವೃದ್ಧಿಗೆ ಸಹಕಾರಿ -ನ್ಯಾಯವಾದಿ ಕೆ.ಜಿತೇಂದ್ರ appeared first on Karnataka Kahale.
]]>The post ಸಿಂಧುವಾಳ ಗಾದಿಲಿಂಗನ ಕುಂಚದಲ್ಲಿ ಅರಳಿದ ಸಚಿವ ಬಿ.ನಾಗೇಂದ್ರ ಮತ್ತು ಸಹೋದರ ಬಿ. ಪ್ರಸಾದ್ : ಪ್ರಶಂಸೆ appeared first on Karnataka Kahale.
]]>*****
The post ಸಿಂಧುವಾಳ ಗಾದಿಲಿಂಗನ ಕುಂಚದಲ್ಲಿ ಅರಳಿದ ಸಚಿವ ಬಿ.ನಾಗೇಂದ್ರ ಮತ್ತು ಸಹೋದರ ಬಿ. ಪ್ರಸಾದ್ : ಪ್ರಶಂಸೆ appeared first on Karnataka Kahale.
]]>The post ಮಂಜುನಾಥ ಗೊವಿಂದವಾಡರ ಕಲಾ ಪ್ರದರ್ಶನ: ಕಲೆ, ಸಾಹಿತ್ಯ ಸಂಗೀತ ನಾಡಿನ ಸಾಂಸ್ಕೃತಿಕ ಅಸ್ಮಿತೆ -ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅಭಿಮತ appeared first on Karnataka Kahale.
]]>
ನಗರದ ಪ್ರವಾಸೋಧ್ಯಮ ಇಲಾಖೆಯ ಸರಕಾರಿ ಆರ್ಟಗ್ಯಾಲರಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯದಲ್ಲಿ ಬಳ್ಳಾರಿಯ ಕಲಾವಿದ ಮಂಜುನಾಥ ಗೊವಿಂದವಾಡ ಅವರ ಕಲಾ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಪಂಚಕ್ಕೆ ದೇಶದ ಕೊಡುಗೆಗಳಲ್ಲಿ ಕಲೆ ಸಾಹಿತ್ಯ ಸಂಸ್ಕೃತಿ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.
ಹಲವಾರು ದೇಶದ ಸಾಂಸ್ಕೃತಿಕ ಚಿಂತಕರು ಭಾರತೀಯ, ರಾಜ್ಯದ ಪರಂಪರೆಯನ್ನು ಅಧ್ಯಯನ ಮಾಡಲು ಬರುತ್ತಾರೆ ಕಾರಣ ಇಲ್ಲಿಯ ಕಲಾವಿದರ ಪ್ರತಿಭೆ ಎಂದು ಅಭಿಪ್ರಾಯ ಪಟ್ಟರು.

ಕಲಾವಿದರಿಗೆ ಸರಕಾರ ಸ್ಪಂಧಿಸುತ್ತಿರುವುದು ಸಂತೋಷದ ಸಂಗತಿ. ಇಂಥ ಕಲಾ ಪ್ರದರ್ಶನಗಳು ನಿರಂತರವಾಗಿ ನಡೆಯುತ್ತಿರಲಿ ಎಂದು ಹಾರೈಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿ ಕರ್ನಾಟಕ ಲಲಿತಕಲಾ ಅಕಡೆಮಿಯ ಸದಸ್ಯ ರಮೇಶ ಚವ್ಹಾಣ ಮಾತನಾಡಿ, ಇತ್ತೀಚೆಗೆ ವಿಜಯಪುರ ನಗರದಲ್ಲಿ ಕಲಾ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿವೆ. ನಾಡಿನ ನಾನಾ ಭಾಗದ ಕಲಾವಿದರಿಂದ ಪ್ರದರ್ಶನ ನಡೆಯುತ್ತಿರುವುದು ಜಿಲ್ಲೆಯ ಕಲಾಸಕ್ತರಿಗೆ. ತುಂಬ ಸಂತೋಷವನ್ನುಂಟು ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮತ್ತೋರ್ವ ಮುಖ್ಯ ಅತಿಥಿ ಪ್ರವಾಸೋಧ್ಯಮ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಇಲಾಖೆಯ ಆರ್ಟ ಗ್ಯಾಲರಿಯಿಂದ ಪ್ರವಾಸೋದ್ಯಮಕ್ಕೆ ಅನುಕೂಲವಾಗಲಿದೆ. ನಿರಂತರವಾಗಿ ಇಲ್ಲಿ ಕಲಾವಿದರು ಪ್ರದರ್ಶನ, ಶಿಬಿರ ಎರ್ಪಡಿಸುತ್ತಿರುವುದರಿಂದ ನಮಗೂ ಕಲಾಕೃತಿ ನೋಡಿ ಆಸ್ವಾದಿಸುವಂತಾಗುತ್ತಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಹಿರಿಯ ಕಲಾವಿದ ಪಿ.ಎಸ್.ಕಡೇಮನಿ ಮಾತನಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಯೋಜನೆ ಪಡೆದು ವಿಜಯಪುರದಲ್ಲಿ ಪ್ರದರ್ಶನ ಏರ್ಪಡಿಸಿದ್ದು ಸಂತೊಷದ ಸಂಗತಿ. ಇದರಿಂದ ಬೇರೆ ಬೇರೆ ಜಿಲ್ಲೆಯ ಮತ್ತು ರಾಜ್ಯದ ಕಲಾವಿದರು ನಮ್ಮ ಜಿಲ್ಲೆಯ ಕಲಾವಿದರೊಂದಿಗೆ ಅನುಸಂಧಾನವಾಗುತ್ತದೆ. ಕಲಾ ಪ್ರದರ್ಶನ ಆಯೋಜಿಸಿರುವ ಮಂಜುನಾಥ ಗೋವಿಂದವಾಡ ಅವರು ಅಭಿನಂಧನಾರ್ಹರು ಎಂದು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ, ಹಿರಿಯ ಕಲಾವಿದರಾದ ಬಿ.ಎಸ್. ಪಾಟೀಲ್, ಲಿಂಗರಾಜ ಕಾಚಾಪುರ, ರುದ್ರಗೌಡ ಇಂಡಿ, ಶಿವಾನಂದ ಅಥಣಿ, ಮದನ ವಗ್ಯಾನವರ, ಯಾಮಿನಿ ಶಹಾ, ಜಿಲ್ಲಾ ಪ್ರವಾಸಿ ಅಧಿಕಾರಿ ತುಕಾರಾಮ ಪವಾರ, ಅನಿಲ, ಜಗದೇವ ಗುಣಕಿ, ಆನಂದ ಸಹಿತ ಕಲಾಸಕ್ತರು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು. ಹಿರಿಯ ಕಲಾವಿದ ವಿದ್ಯಾಧರ ಸಾಲಿ ಕಾರ್ಯಕ್ರಮ ನಿರ್ವಹಿಸಿದರು.
*****
The post ಮಂಜುನಾಥ ಗೊವಿಂದವಾಡರ ಕಲಾ ಪ್ರದರ್ಶನ: ಕಲೆ, ಸಾಹಿತ್ಯ ಸಂಗೀತ ನಾಡಿನ ಸಾಂಸ್ಕೃತಿಕ ಅಸ್ಮಿತೆ -ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅಭಿಮತ appeared first on Karnataka Kahale.
]]>The post ಕಾಗದ ಸಾಂಗತ್ಯ ವೇದಿಕೆ ಆಯೋಜನೆ: ಗಮನ ಸೆಳೆದ ‘ಅಂಚೆ ಕಾರ್ಡಿನಲ್ಲಿ ಅಂಬೇಡ್ಕರ್’ ಚಿತ್ರಕಲಾ ಸ್ಪರ್ಧೆ appeared first on Karnataka Kahale.
]]>
ರಾಣೇಬೆನ್ನೂರು, ಅ. 19: ನಗರದ ಕಾಗದ ಸಾಂಗತ್ಯ ವೇದಿಕೆ ಮಕ್ಕಳಿಗಾಗಿ “ಅಂಚೆ ಕಾರ್ಡಿನಲ್ಲಿ ಅಂಬೇಡ್ಕರ್” ಚಿತ್ರಕಲಾಸ್ಪರ್ಧೆ ಏರ್ಪಡಿಸಿತ್ತು.
ಅರ್ಥಪೂರ್ಣ ಹಾಗೂ ಆಕರ್ಷಕವಾಗಿ ಅಂಚೆಕಾರ್ಡಿನಲ್ಲಿ ಅಂಬೇಡ್ಕರ್ ಚಿತ್ರ ರಚಿಸಿ ಪ್ರಶಸ್ತಿ ಪಡೆದ ಶಿವಮೊಗ್ಗದ ಫೇಸ್ ಯು.ಎಂ.ಪಿ.ಯು ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿ ವೈಷ್ಣವಿ.ಬಿ ಅವರಿಗೆ ಪ್ರಶಸ್ತಿ ಪತ್ರ, ನಗದು ಬಹುಮಾನಗಳನ್ನು ನೀಡಿ ಪುರಸ್ಕರಿಸಲಾಯಿತು.
ರಾಣೆಬೆನ್ನೂರು ಸಮೀಪದ ನಂದಿಗಾವಿ ಗ್ರಾಮದ ಶ್ರೀ ವಿಶ್ವೇಶ್ವರ ಶಿವಾಚಾರ್ಯ ಹಾಲಸ್ವಾಮಿ ಮಠದ(ಶ್ರಿ ಗುರು ಕೊಟ್ರಪ್ಪಜ್ಜನ ಗದ್ದುಗೆ) ಆವರಣದಲ್ಲಿ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದ ಮುಖ್ಯ ಅತಿಥಿ ಕವಿ, ಅಧ್ಯಾಪಕ ದೇವರಾಜ ಹುಣಸಿಕಟ್ಟಿ ಅವರು ಮಾತನಾಡಿ, ಕೊರೋನಾ ಕಾಲದಲ್ಲಿ ಮುನ್ನಲೆಗೆ ಬಂದ ಆನ್ಲೈನ್ ಶಿಕ್ಷಣ ಮಕ್ಕಳಿಗೆ ಪೂರಕವು ಹೌದು, ಎಚ್ಚರ ತಪ್ಪಿದರೆ ಮಾರಕವು ಹೌದು ಎಂದು ಅಭಿಪ್ರಾಯಪಟ್ಟರು.
ಆನ್ಲೈನ್ ಮೂಲಕ ಚಿತ್ರಕಲೆಯ ಹೊಸಸಾಧ್ಯತೆಗಳನ್ನು
ವಿದ್ಯಾಥಿಗಳಿಗಳಲ್ಲಿ ಅನಾವರಣಗೊಳಿಸಲು ಸಾಧ್ಯವಾಗಿದೆ. ಪಾಲಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದರ ಜೊತೆಗೆ ಉತ್ತಮ ಸಂಸ್ಕಾರ ನೀಡುವುದು ಅವಶ್ಯ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ವೇದಿಕೆಯ ಸಂಸ್ಥಾಪಕ, ಅಧ್ಯಕ್ಷ ನಾಮದೇವ ಕಾಗದಗಾರ ಅವರು, ಪ್ರತಿಯೊಬ್ಬ ವಿದ್ಯಾರ್ಥಿಯ ಬೆಳವಣಿಗೆಗೆ ಪೋಷಕರು ಮತ್ತು ಗುರುಗಳ ಪಾತ್ರ ಅನನ್ಯ ಎಂದು ಹೇಳಿದರು.
ದೇಶದ ಅಭಿವೃದ್ಧಿಯಲ್ಲಿ ಕಲಾಶಿಕ್ಷಣ ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಕೇವಲ ಪದವಿ ಪಡೆದುಕೊಂಡರೇ ಸಾಲದು. ವಿವಿಧ ಕ್ಷೇತ್ರಗಳಲ್ಲಿ ಸಾಧಿಸುವ ಮೂಲಕ ದೇಶಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಬೇಕು ಎಂದು ಸಲಹೆ ನೀಡಿದರು. ಶಿಕ್ಷಣ ನಿರಂತರ ಕಲಿಕೆಯ ಪ್ರಕ್ರಿಯೆ. ಕಲಾಶಿಕ್ಷಣ ಮನಸ್ಸಿನಲ್ಲಿರುವ ಅದೃಶ್ಯವಾದ ಅನೇಕ ಭಾವನೆಗಳಿಗೆ ಮೂರ್ತ ಸ್ವರೂಪವನ್ನು ಸೃಷ್ಟಿಸುತ್ತದೆ ಮಾತ್ರವಲ್ಲ,
ಸ್ಮರಣ ಶಕ್ತಿ ಹೆಚ್ಚಿಸುವುದಲ್ಲದೇ ರೂಪರಚನಾ ಸಾಮರ್ಥ್ಯ ಕಡಿಮೆ ಇರುವ ಹಾಗೂ ಬೌದ್ಧಿಕವಾಗಿ ಮಂದವಾಗಿರುವ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ನಾಮದೇವ ಅವರು ವಿವರಿಸಿದರು.
ಕಾರ್ಯಕ್ರಮದಲ್ಲಿ ಪಿ.ಭೀಮೇಶ, ದೀಪಾ.ಪಿ, ವರ್ಷಿಣಿ.ಬಿ, ಕೃಷ್ಣಮೂರ್ತಿ ಬಳಿಗಾರ ಮುಂತಾದವರು ಉಪಸ್ಥಿತರಿದ್ದರು.
*****
The post ಕಾಗದ ಸಾಂಗತ್ಯ ವೇದಿಕೆ ಆಯೋಜನೆ: ಗಮನ ಸೆಳೆದ ‘ಅಂಚೆ ಕಾರ್ಡಿನಲ್ಲಿ ಅಂಬೇಡ್ಕರ್’ ಚಿತ್ರಕಲಾ ಸ್ಪರ್ಧೆ appeared first on Karnataka Kahale.
]]>The post ಬಳ್ಳಾರಿಯಲ್ಲಿ ವಿಶ್ವ ಚಿತ್ರಕಲಾ ದಿನಾಚರಣೆ: ಶ್ರೀಮಂಜುನಾಥ ಲಲಿತಾ ಕಲಾ ಬಳಗದಿಂದ ಚಿತ್ರಕಲಾ ಪ್ರದರ್ಶನ appeared first on Karnataka Kahale.
]]>
The post ಬಳ್ಳಾರಿಯಲ್ಲಿ ವಿಶ್ವ ಚಿತ್ರಕಲಾ ದಿನಾಚರಣೆ: ಶ್ರೀಮಂಜುನಾಥ ಲಲಿತಾ ಕಲಾ ಬಳಗದಿಂದ ಚಿತ್ರಕಲಾ ಪ್ರದರ್ಶನ appeared first on Karnataka Kahale.
]]>The post ಆಸಕ್ತಿ,ಶ್ರದ್ಧೆ, ಪರಿಶ್ರಮವಿದ್ದರೆ ಚಿತ್ರಕಲಾ ಕ್ಷೇತ್ರದಲ್ಲೂ ಹೆಸರು ಮಾಡಬಹುದು -ನಾಗೇಶ್ ರಾವ್ appeared first on Karnataka Kahale.
]]>
The post ಆಸಕ್ತಿ,ಶ್ರದ್ಧೆ, ಪರಿಶ್ರಮವಿದ್ದರೆ ಚಿತ್ರಕಲಾ ಕ್ಷೇತ್ರದಲ್ಲೂ ಹೆಸರು ಮಾಡಬಹುದು -ನಾಗೇಶ್ ರಾವ್ appeared first on Karnataka Kahale.
]]>The post ಇಂದು ವಿಶ್ವ ಜಲ ದಿನ. ಚಿತ್ರಗಳ ಮೂಲಕ ಜಲ ಜಾಗೃತಿ ಮೂಡಿಸುತ್ತಿರುವ ನಾಮದೇವ ಕಾಗದಗಾರ appeared first on Karnataka Kahale.
]]>
ನೀರು ಉಳಿತಾಯದ ಆಚರಣೆ” ಇಂದಿನ ವಿಶ್ವ ಜಲ ದಿನಕ್ಕೆ ಮೀಸಲಾಗದೇ ದಿನನಿತ್ಯದ ಆಚರಣೆಯಾಗಬೇಕು.. ಕಡ್ಡಾಯವಾಗಿ ಜಾರಿಗೆ ತರಬೇಕು..ನಮ್ಮನ್ನೂ ನಿಮ್ಮನ್ನೂ ಸೇರಿ ಇಲಾಖೆಗಳು, ಸಂಘ ಸಂಸ್ಥೆಗಳಲ್ಲಿ ಎಂದೂ ಇಲ್ಲದ್ದು ಇಂದಿನ ದಿನ ಮಾತ್ರ “ನೀರು ಉಳಿತಾಯದ ಬಗ್ಗೆ ಜಾಗೃತಿ, ಪ್ರೀತಿ, ಕಾಳಜಿ ಮಾತ್ರ ಬಹಳಷ್ಟು ಎದ್ದು ಕಾಣುತ್ತದೆ. ಪುಕ್ಕಟ್ಟೇ ಭಾಷಣ ಬಿಗಿದು, ಬ್ಯಾನರ್ಸ್ , ಫಲಕ ಹಿಡಿದು ಒಂದಿಷ್ಟು ಜಾಗೃತಿ ಮೂಡಿಸಿ ಪ್ರಚಾರಕ್ಕೆ ಮಾತ್ರ ಸೀಮಿತರಾಗಿ ಬಿಡುತ್ತೇವೆ.. ಮತ್ತೇ ಮುಂದಿನ ಇದೇ ಮಾರ್ಚ 22 ಕ್ಕೆ ಕಾಯುತ್ತೇವೆ…
ಒಂದು ತೊಲೆ ಬಂಗಾರ ನೀಡುವೆ ಒಂದು ಹನಿ ನೀರು ಕೊಡಿ ಎಂದರೂ ನೀರು ಸಿಗದ ಪರಿಸ್ಥಿತಿ ಎದುರಾಗುವುದನ್ನು ಸದ್ಯದಲ್ಲಿಯೇ ಕಾಣುತ್ತೇವೆ…ರೇಶನ್ ಅಂಗಡಿಯ ಮುಂದೆ ನೀರು ಖಾಲಿಯಾಗಿದೆ ಮುಂದಿನ ತಿಂಗಳು ಬನ್ನಿ ಎಂಬ ಬೋರ್ಡ್ ಕಾಣುತ್ತೇವೆ…… ಈಗಿನಿಂದಲೇ ಎಚ್ಚರಗೊಳ್ಳೋಣ..
****
ಪ್ರಸ್ತುತ ಜನ ಎದುರಿಸುತ್ತಿರುವ ಗಂಭೀರ ಪರಿಸ್ಥಿತಿ ಕುರಿತಾಗಿ ನಾಮದೇವ ಕಾಗದಗಾರ ಅವರು ಚಿತ್ರಿಸಿದ ಚಿತ್ರಗಳು ಗಮನಸೆಳೆಯುತ್ತಿವೆ…
The post ಇಂದು ವಿಶ್ವ ಜಲ ದಿನ. ಚಿತ್ರಗಳ ಮೂಲಕ ಜಲ ಜಾಗೃತಿ ಮೂಡಿಸುತ್ತಿರುವ ನಾಮದೇವ ಕಾಗದಗಾರ appeared first on Karnataka Kahale.
]]>The post ಕಣ್ತಣಿಸಿ ಹೃನ್ಮನ ಸೂರೆಗೊಂಡ ತೊಗಲುಗೊಂಬೆ ರೂಪಕ “ಬಾಪೂಜಿ” appeared first on Karnataka Kahale.
]]>
ರಕ್ಷಿತಾ.ಆರ್ ಪ್ರಾರ್ಥಿಸಿದರು. ಟ್ರಸ್ಟಿನ ಸ್ಥಾಯಿ ಸದಸ್ಯರಾದ ಗಂಗಾಧರ ದುರ್ಗಂ ಮತ್ತು ಸುರೇಂದ್ರಸ್ವಾಮಿ ನಿರೂಪಿಸಿದರು.The post ಕಣ್ತಣಿಸಿ ಹೃನ್ಮನ ಸೂರೆಗೊಂಡ ತೊಗಲುಗೊಂಬೆ ರೂಪಕ “ಬಾಪೂಜಿ” appeared first on Karnataka Kahale.
]]>The post ಚಿತ್ರಕಲಾ ಸ್ಪರ್ಧೆ: ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ರಾಣೇಬೆನ್ನೂರಿನ ಬಾಲ ಪ್ರತಿಭೆಗಳು appeared first on Karnataka Kahale.
]]>

The post ಚಿತ್ರಕಲಾ ಸ್ಪರ್ಧೆ: ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ರಾಣೇಬೆನ್ನೂರಿನ ಬಾಲ ಪ್ರತಿಭೆಗಳು appeared first on Karnataka Kahale.
]]>